ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.
ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm