ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.


ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm