ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.


ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm