ಬ್ರೇಕಿಂಗ್ ನ್ಯೂಸ್
29-07-24 01:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ಕೇರಳದಲ್ಲಿ ನಿಫಾ ವೈರಸ್ ಸೋಂಕಿಗೆ ತುತ್ತಾದ ರೋಗಿಗೆ ಆರೈಕೆ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕು ತಗಲಿ ಕೋಮಾ ಸ್ಥಿತಿಗೆ ತಲುಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್, ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲಿರುವಾಗಲೇ 2023 ಸೆಪ್ಟೆಂಬರ್ ತಿಂಗಳಲ್ಲಿ ಇವರು ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆ ಮಾಡಿದ್ದರು ಎನ್ನಲಾಗಿದೆ. ಆಬಳಿಕ ಕ್ವಾರಂಟೈನ್ ನಲ್ಲಿದ್ದ ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿತ್ತು.
ಡಿಸೆಂಬರ್ ತಿಂಗಳಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ನಿಫಾ ಸೋಂಕಿನಿಂದಾಗಿಯೇ ಮಿದುಳಿನ ಸ್ಟ್ರೋಕ್ ಆಗಿರುವುದು ತಿಳಿದುಬಂದಿದ್ದು ಕೆಲವು ದಿನಗಳಲ್ಲೇ ಕೋಮಾ ಸ್ಥಿತಿಗೆ ಜಾರಿದ್ದರು. ಆನಂತರ ಅದೇ ಆಸ್ಪತ್ರೆಯ ಆಡಳಿತ ಮಂಡಳಿ ವತಿಯಿಂದಲೇ ಚಿಕಿತ್ಸೆ ನೀಡಿದ್ದರೂ, ಯಾವುದೇ ಫಲ ಕಂಡಿಲ್ಲ. ಆಡಳಿತ ಮಂಡಳಿ ಈಗಾಗಲೇ 40 ಲಕ್ಷ ರೂ.ಗಳಷ್ಟು ಖರ್ಚು ಭರಿಸಿದ್ದು, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಇನ್ಮುಂದೆ ನಿಭಾಯಿಸುವುದು ಕಷ್ಟ ಎಂದು ಪ್ರತಿಕ್ರಿಯೆ ನೀಡಿದೆ.
ಹೀಗಾಗಿ ಉನ್ನತ ಮಟ್ಟದ ಆಸ್ಪತ್ರೆಗೆ ದಾಖಲಿಸಿ ಮಗನಿಗೆ ಚಿಕಿತ್ಸೆ ನೀಡುವಂತೆ ಕುಟುಂಬಸ್ಥರು ಕೇರಳ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಒಂದು ವರ್ಷದ ಹಿಂದೆ ಮಾರಣಾಂತಿಕ ಎನ್ನಲಾದ ನಿಫಾ ಸೋಂಕು ಕೇರಳದಲ್ಲಿ ಒಂದಿಬ್ಬರಿಗೆ ಕಂಡುಬಂದಿತ್ತು. ಆನಂತರ ಸೋಂಕಿಗೆ ಒಳಗಾದವರು ಚಿಕಿತ್ಸೆ ಪಡೆದು ಚೇತರಿಸಿದ್ದರು.
A man from Dakshina Kannada district, who was taking care of a patient infected with Nipah virus in Kerala, has been infected with Nipah virus and has gone into a coma.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm