ಬ್ರೇಕಿಂಗ್ ನ್ಯೂಸ್
29-07-24 01:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ಕೇರಳದಲ್ಲಿ ನಿಫಾ ವೈರಸ್ ಸೋಂಕಿಗೆ ತುತ್ತಾದ ರೋಗಿಗೆ ಆರೈಕೆ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕು ತಗಲಿ ಕೋಮಾ ಸ್ಥಿತಿಗೆ ತಲುಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್, ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲಿರುವಾಗಲೇ 2023 ಸೆಪ್ಟೆಂಬರ್ ತಿಂಗಳಲ್ಲಿ ಇವರು ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆ ಮಾಡಿದ್ದರು ಎನ್ನಲಾಗಿದೆ. ಆಬಳಿಕ ಕ್ವಾರಂಟೈನ್ ನಲ್ಲಿದ್ದ ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿತ್ತು.
ಡಿಸೆಂಬರ್ ತಿಂಗಳಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ನಿಫಾ ಸೋಂಕಿನಿಂದಾಗಿಯೇ ಮಿದುಳಿನ ಸ್ಟ್ರೋಕ್ ಆಗಿರುವುದು ತಿಳಿದುಬಂದಿದ್ದು ಕೆಲವು ದಿನಗಳಲ್ಲೇ ಕೋಮಾ ಸ್ಥಿತಿಗೆ ಜಾರಿದ್ದರು. ಆನಂತರ ಅದೇ ಆಸ್ಪತ್ರೆಯ ಆಡಳಿತ ಮಂಡಳಿ ವತಿಯಿಂದಲೇ ಚಿಕಿತ್ಸೆ ನೀಡಿದ್ದರೂ, ಯಾವುದೇ ಫಲ ಕಂಡಿಲ್ಲ. ಆಡಳಿತ ಮಂಡಳಿ ಈಗಾಗಲೇ 40 ಲಕ್ಷ ರೂ.ಗಳಷ್ಟು ಖರ್ಚು ಭರಿಸಿದ್ದು, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಇನ್ಮುಂದೆ ನಿಭಾಯಿಸುವುದು ಕಷ್ಟ ಎಂದು ಪ್ರತಿಕ್ರಿಯೆ ನೀಡಿದೆ.
ಹೀಗಾಗಿ ಉನ್ನತ ಮಟ್ಟದ ಆಸ್ಪತ್ರೆಗೆ ದಾಖಲಿಸಿ ಮಗನಿಗೆ ಚಿಕಿತ್ಸೆ ನೀಡುವಂತೆ ಕುಟುಂಬಸ್ಥರು ಕೇರಳ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಒಂದು ವರ್ಷದ ಹಿಂದೆ ಮಾರಣಾಂತಿಕ ಎನ್ನಲಾದ ನಿಫಾ ಸೋಂಕು ಕೇರಳದಲ್ಲಿ ಒಂದಿಬ್ಬರಿಗೆ ಕಂಡುಬಂದಿತ್ತು. ಆನಂತರ ಸೋಂಕಿಗೆ ಒಳಗಾದವರು ಚಿಕಿತ್ಸೆ ಪಡೆದು ಚೇತರಿಸಿದ್ದರು.
A man from Dakshina Kannada district, who was taking care of a patient infected with Nipah virus in Kerala, has been infected with Nipah virus and has gone into a coma.
22-09-24 07:10 pm
Bangalore Correspondent
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
22-09-24 08:25 pm
Mangalore Correspondent
Karwar Murder, Crime: ಕಾರವಾರದಲ್ಲಿ ಬೆಳ್ಳಂಬೆಳಗ್...
22-09-24 02:37 pm
Mangalore crime, Theft: ಮೂಡುಬಿದ್ರೆಯಲ್ಲಿ ವೃದ್ಧ...
21-09-24 10:56 pm
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am