ಬ್ರೇಕಿಂಗ್ ನ್ಯೂಸ್
29-07-24 02:49 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 29: ಮನೆಯ ಬಾತ್ ರೂಮಿನಲ್ಲಿ ಸ್ನಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿಯೊಬ್ಬ ಗ್ಯಾಸ್ ಗೀಸರ್ ಸೋರಿಕೆಯಾಗಿ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನಲ್ಲಿ ನಡೆದಿದೆ.
ಕೋಟೆಬಾಗಿಲಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು ಮೊಹಮ್ಮದ್ ಶಾರಿಕ್ (18) ಮೃತ ವಿದ್ಯಾರ್ಥಿ. ಪಿಯುಸಿ ಮುಗಿಸಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ ಪದವಿಗೆ ಸೇರಿದ್ದ. ಭಾನುವಾರ ರಾತ್ರಿ ಪಕ್ಕದ ಮನೆಯಲ್ಲಿ ಏನೋ ಕೆಲಸ ಇದ್ದುದರಿಂದ ತಡವಾಗಿ ಮನೆಗೆ ಬಂದಿದ್ದು ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದ. ಆನಂತರ, ಸ್ವಲ್ಪ ಹೊತ್ತಿನ ಬಳಿಕ ಆತನ ಅಣ್ಣ ಬಂದಿದ್ದು ತಮ್ಮ ಎಲ್ಲಿದ್ದಾನೆಂದು ತಾಯಿ ಬಳಿ ಕೇಳಿದ್ದ.
ಆಗ ಸ್ನಾನಕ್ಕೆ ಹೋಗಿದ್ದಾಗಿ ತಾಯಿ ಹೇಳಿದ್ದರು. ತುಂಬ ಹೊತ್ತಾದರೂ ತಮ್ಮ ಬಾರದ ಕಾರಣ ಬಾಗಿಲು ಬಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಶಾರೀಕ್ ನೆಲದಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿತ್ತು. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆಯಾಗಿ ಶಾರಿಕ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೂಡಲೇ ಮನೆಯವರು ಯುವಕನನ್ನು ಆಳ್ವಾಸ್ ಆಸ್ಪತ್ರೆಗೆ ಕರೆತಂದಿದ್ದರು. ಅಷ್ಟರಲ್ಲಿ ಶಾರಿಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇವರ ತಂದೆ ತೀರಿಕೊಂಡಿದ್ದು ತಾಯಿಗೆ ಇಬ್ಬರು ಮಕ್ಕಳು ಮಾತ್ರ ಇದ್ದರು.
ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪೋಸ್ಟ್ ಮಾರ್ಟಂ ಬಳಿಕ ನೈಜ ಕಾರಣ ಗೊತ್ತಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Mangalore Moodbidri 18 year old dies after gas leakage from geyser. The deceased has been identified as Mohammed Sharik.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm