ಬ್ರೇಕಿಂಗ್ ನ್ಯೂಸ್
29-07-24 02:49 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 29: ಮನೆಯ ಬಾತ್ ರೂಮಿನಲ್ಲಿ ಸ್ನಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿಯೊಬ್ಬ ಗ್ಯಾಸ್ ಗೀಸರ್ ಸೋರಿಕೆಯಾಗಿ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನಲ್ಲಿ ನಡೆದಿದೆ.
ಕೋಟೆಬಾಗಿಲಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು ಮೊಹಮ್ಮದ್ ಶಾರಿಕ್ (18) ಮೃತ ವಿದ್ಯಾರ್ಥಿ. ಪಿಯುಸಿ ಮುಗಿಸಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ ಪದವಿಗೆ ಸೇರಿದ್ದ. ಭಾನುವಾರ ರಾತ್ರಿ ಪಕ್ಕದ ಮನೆಯಲ್ಲಿ ಏನೋ ಕೆಲಸ ಇದ್ದುದರಿಂದ ತಡವಾಗಿ ಮನೆಗೆ ಬಂದಿದ್ದು ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದ. ಆನಂತರ, ಸ್ವಲ್ಪ ಹೊತ್ತಿನ ಬಳಿಕ ಆತನ ಅಣ್ಣ ಬಂದಿದ್ದು ತಮ್ಮ ಎಲ್ಲಿದ್ದಾನೆಂದು ತಾಯಿ ಬಳಿ ಕೇಳಿದ್ದ.
ಆಗ ಸ್ನಾನಕ್ಕೆ ಹೋಗಿದ್ದಾಗಿ ತಾಯಿ ಹೇಳಿದ್ದರು. ತುಂಬ ಹೊತ್ತಾದರೂ ತಮ್ಮ ಬಾರದ ಕಾರಣ ಬಾಗಿಲು ಬಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಶಾರೀಕ್ ನೆಲದಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿತ್ತು. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆಯಾಗಿ ಶಾರಿಕ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೂಡಲೇ ಮನೆಯವರು ಯುವಕನನ್ನು ಆಳ್ವಾಸ್ ಆಸ್ಪತ್ರೆಗೆ ಕರೆತಂದಿದ್ದರು. ಅಷ್ಟರಲ್ಲಿ ಶಾರಿಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇವರ ತಂದೆ ತೀರಿಕೊಂಡಿದ್ದು ತಾಯಿಗೆ ಇಬ್ಬರು ಮಕ್ಕಳು ಮಾತ್ರ ಇದ್ದರು.
ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪೋಸ್ಟ್ ಮಾರ್ಟಂ ಬಳಿಕ ನೈಜ ಕಾರಣ ಗೊತ್ತಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Mangalore Moodbidri 18 year old dies after gas leakage from geyser. The deceased has been identified as Mohammed Sharik.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm