ಬ್ರೇಕಿಂಗ್ ನ್ಯೂಸ್
29-07-24 09:22 pm Mangalore Correspondent ಕರಾವಳಿ
ಉಳ್ಳಾಲ, ಜು.29: ಉಳ್ಳಾಲದ ಕೋಟೆಪುರದಿಂದ ಉಚ್ಚಿಲ ಬಟ್ಟಪ್ಪಾಡಿ ತನಕದ ಕಡಲ್ಕೊರೆತ ಪೀಡಿತ ಸೂಕ್ಷ್ಮ ಪ್ರದೇಶಗಳನ್ನ ಗುರುತಿಸಿದ್ದು ಅಲ್ಲಿ ತಕ್ಷಣವೇ ತಾತ್ಕಾಲಿಕ ರಕ್ಷಣಾ ಕಾಮಗಾರಿ ನಡೆಸಲು ಆದೇಶಿಸಲಾಗಿದೆ. ಕಡಲ್ಕೊರೆತದಿಂದ ಮನೆ, ರಸ್ತೆಗಳಿಗೆ ಹಾನಿಯುಂಟಾಗಲು ನಾವು ಬಿಡುವುದಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಸೋಮವಾರ ಉಳ್ಳಾಲದ ಕಡಲ್ಕೊರೆತ ಪೀಡಿತ ಪ್ರದೇಶಗಳಾದ ಕೋಟೆಪುರ, ಮೊಗವೀರ ಪಟ್ಣ, ಸೀಗ್ರೌಂಡ್, ನ್ಯೂ ಉಚ್ಚಿಲ, ಉಚ್ಚಿಲ ಬಟ್ಟಪ್ಪಾಡಿ ಪ್ರದೇಶಗಳಿಗೆ ಅಧಿಕಾರಿಗಳ ಜತೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉಳ್ಳಾಲ ಕೋಟೆಪುರದಿಂದ ಬಟ್ಟಪ್ಪಾಡಿ ತನಕದ ಕಡಲ್ಕೊರೆತ ತೀವ್ರತೆಯ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಎಡಿಬಿ ಯೋಜನೆಯ ಮೂಲಕ ಕಡಲ್ಕೊರೆತ ತಡೆಯ ಬ್ರೇಕ್ ವಾಟರ್ ಕಾಮಗಾರಿ ನಡೆದ ಕಾರಣ ಮನೆಗಳಿಗೆ ಹಾನಿ ಉಂಟಾಗುವುದು ಬಹುತೇಕ ಕಡಿಮೆ ಆಗಿದೆ. ಬಟ್ಟಪ್ಪಾಡಿಯಲ್ಲಿ ನಾಲ್ಕು ವರುಷಗಳ ಹಿಂದೆ ರಸ್ತೆ ಸಂಪರ್ಕ ಕಡಿತ ಆದನಂತರ ಆ ಪ್ರದೇಶದಲ್ಲಿ ಕಡಲ್ಕೊರೆತ ತಡೆಯ ಶಾಶ್ವತ ಕಾಮಗಾರಿ ಆಗಿಲ್ಲ. ಬಟ್ಟಪ್ಪಾಡಿ ಪ್ರದೇಶದ ಮನೆಗಳ ರಕ್ಷಣೆಗಾಗಿ ತಾತ್ಕಾಲಿಕ ರಕ್ಷಣಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೆವು. ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡಿದರೂ ಪ್ರತೀ ವರ್ಷವೂ ಅದರ ಸಮರ್ಪಕ ನಿರ್ವಹಣೆ ಅಗತ್ಯ.


ಎಡಿಬಿ ಯೋಜನೆಯಿಂದ ನಡೆದ ಬ್ರೇಕ್ ವಾಟರ್ ಕಾಮಗಾರಿಯ ಸಮರ್ಪಕ ನಿರ್ವಹಣೆ ಆಗಿಲ್ಲ. ಮತ್ತೆ ಇದನ್ನ ಸುಸ್ಥಿರ ಮಾಡಲು ನಿರ್ವಹಣೆಯ ಖರ್ಚಿನ ಅಂದಾಜು ಪಟ್ಟಿಯ ವರದಿಯನ್ನ ಸರಕಾರಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಅದಕ್ಕೆ ಅನುಗುಣವಾಗಿ ಮುಂದಿನ ವರ್ಷ ನಿರ್ವಹಣೆ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ. ಬಿರುಸಿನ ಮಳೆಗಾಲದ ಈ ಹಂತದಲ್ಲಿ ಅತಿ ಅಗತ್ಯತೆ ಇರುವ ಸ್ಥಳಗಳಲ್ಲಿ ಕಡಲ್ಕೊರೆತ ತಡೆಯ ತಾತ್ಕಾಲಿಕ ಕೆಲಸ, ಕಾಮಗಾರಿ ಚಾಲನೆ ಕೊಡುವ ಬಗ್ಗೆ ವೀಕ್ಷಣೆ ನಡೆಸಲು ಬಂದಿರುವುದಾಗಿ ತಿಳಿಸಿದರು.
ಕೆಲವರು ಸಮುದ್ರ ತೀರದ ತಮ್ಮ ಖಾಸಗಿ ಜಾಗದ ಮುಂದೆ ಅಲೆಗಳನ್ನ ನಿಯಂತ್ರಿಸಲು ಕಲ್ಲುಗಳನ್ನ ಹಾಕುತ್ತಿದ್ದಾರೆ. ಸಾರ್ವಜನಿಕ ರಸ್ತೆಯ ಜಾಗ ಬಿಟ್ಟು ಭವಿಷ್ಯದ ಕಾಮಗಾರಿಗೆ ತೊಂದರೆ ಕೊಡದಂತೆ ಖಾಸಗಿಯವರು ಅಧಿಕಾರಿಗಳಿಂದ ಒಪ್ಪಿಗೆ ತೆಗೆದೇ ಸಮುದ್ರ ತೀರಕ್ಕೆ ಕಲ್ಲುಗಳನ್ನ ಹಾಕುವ ಕಾಮಗಾರಿ ನಡೆಸಬೇಕೆಂಬ ನಿಯಮ ಮಾಡಿರುವುದಾಗಿ ಸ್ಪೀಕರ್ ಖಾದರ್ ಹೇಳಿದರು.
ನ್ಯೂ ಉಚ್ಚಿಲದ ವಾಸ್ಕೋ ರೆಸಾರ್ಟ್ ಮುಂದೆ ಕಡಲು ಪ್ರಕ್ಷುಬ್ದಗೊಂಡಿದ್ದು ಉಚ್ಚಿಲ- ಸೋಮೇಶ್ವರ ಸಂಪರ್ಕ ರಸ್ತೆ ಕಡಿತಗೊಳ್ಳುವ ಭೀತಿ ಎದುರಾಗಿದೆ. ಪ್ರದೇಶದ ಕಡಲ ತೀರದಲ್ಲಿರುವ ಯೋಗೀಶ್ ಎಂಬವರ ಮನೆ ಕೊಚ್ಚಿ ಹೋಗುವ ಹಂತದಲ್ಲಿದೆ. ನ್ಯೂ ಉಚ್ಚಿಲಕ್ಕೆ ಬೇಟಿ ನೀಡಿದ ಖಾದರ್ ಅವರು ಯೋಗೀಶ್ ಅವರನ್ನ ಭೇಟಿ ನೀಡಿ ಧೈರ್ಯ ತುಂಬಿದರು. ಮನೆ, ಸಂಪರ್ಕ ರಸ್ತೆಗೆ ಹಾನಿಯಾಗಲು ನಾವು ಬಿಡುವುದಿಲ್ಲ. ತಕ್ಷಣವೇ ತಾತ್ಕಾಲಿಕ ರಕ್ಷಣಾ ಕಾಮಗಾರಿ ನಡೆಸಲು ಆದೇಶಿಸಿರುವುದಾಗಿ ಹೇಳಿದರು.
ಮಂಗಳೂರು ಸಹಾಯಕ ಕಮೀಷನರ್ ಹರ್ಷವರ್ಧನ್, ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಬಂದರು ಇಲಾಖೆ ಅಧಿಕಾರಿ ರಾಜೇಶ್, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಸದಸ್ಯರಾದ ರವಿಶಂಕರ್ ಸೋಮೇಶ್ವರ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರು, ಮುಖಂಡರಾದ ಸುರೇಶ್ ಭಟ್ನಗರ ಮೊದಲಾದವರು ಉಪಸ್ಥಿತರಿದ್ದರು.
Mangalore Ullal, speaker ut khader visits alll beaches to see sea Erosion, instructs officers for measurement.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm