ಬ್ರೇಕಿಂಗ್ ನ್ಯೂಸ್
30-07-24 08:36 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಕ್ಕಿ ಹರಿದಿವೆ. ಉಪ್ಪಿನಂಗಡಿಯಲ್ಲಿ ಇವರೆಡು ನದಿಗಳಲ್ಲಿ ಭಾರೀ ನೀರು ಬಂದಿದ್ದರಿಂದ ಅಪಾಯದ ಮಟ್ಟ ಮೀರಿ ಹರಿದಿದೆ. 29 ಮೀಟರ್ ಎತ್ತರಕ್ಕೂ ಹೆಚ್ಚಿನ ಮಟ್ಟದಲ್ಲಿ ನೀರು ಬಂದಿದ್ದರಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗಿದೆ. ಇದೇ ವೇಳೆ, ಜುಲೈ 31ರ ಮಂಗಳವಾರ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಉಪ್ಪಿನಂಗಡಿಯಲ್ಲಿ ಎರಡು ನದಿಗಳು ಸಂಗಮಗೊಳ್ಳುವುದರಿಂದ ಅತಿ ಹೆಚ್ಚು ನೀರು ಬಂದರೆ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗುತ್ತದೆ. ಅಷ್ಟರ ಮಟ್ಟಿಗೆ ನೀರು ಬಂದರೆ ಸಂಗಮ ಆಗುತ್ತದೆ ಎನ್ನುವುದು ನಂಬಿಕೆ. ರಾತ್ರಿ ವೇಳೆ ಬಹುತೇಕ ಸಂಗಮದ ಕ್ಷಣ ಎದುರಾಗುವ ಸಾಧ್ಯತೆಯಿದೆ. ಸೋಮವಾರ ಸಂಜೆ ಪುತ್ತೂರು ಶಾಸಕ ಅಶೋಕ್ ರೈ ಉಪ್ಪಿನಂಗಡಿ ದೇವಸ್ಥಾನಕ್ಕೆ ಬಂದು ನದಿಗೆ ಬಾಗಿನ ಅರ್ಪಿಸಿದ್ದಾರೆ.


















ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಪಾಣೆಮಂಗಳೂರು ಸೇತುವೆಗೆ ಮುಟ್ಟುವಷ್ಟು ನದಿಯಲ್ಲಿ ನೀರು ಬಂದಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುವ ಮನಮೋಹಕ ದೃಶ್ಯ ವೈರಲ್ ಆಗಿದೆ. ಬಂಟ್ವಾಳ ಆಸುಪಾಸಿನ ನಂದಾವರ, ಆಲಡ್ಕ, ಅಜಿಲಮೊಗರು, ಗೂಡಿನಬಳಿ ಹೀಗೆ ನೇತ್ರಾವತಿ ನದಿಯ ಇಕ್ಕೆಲಗಳಲ್ಲಿ ನದಿ ನೀರು ಗ್ರಾಮಗಳಿಗೆ ನುಗ್ಗಿದೆ. ಇದರಿಂದಾಗಿ ತಗ್ಗು ಪ್ರದೇಶದ ನಿವಾಸಿಗಳು ಮನೆಯನ್ನು ಬಿಟ್ಟು ಸುರಕ್ಷಿತ ಸ್ಥಳಗಳತ್ತ ತೆರಳಿದ್ದಾರೆ. ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ವಿಕೋಪ ನಿರ್ವಹಣಾ ತಂಡದ ಸದಸ್ಯರು ಬೋಟ್ ಸಹಿತ ರೆಡಿ ಮಾಡಿಟ್ಟುಕೊಂಡಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಆನಂತರ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಭಾರೀ ಮಳೆಯ ಕಾರಣದಿಂದ ಜಿಲ್ಲಾಡಳಿತದ ಅಧಿಕಾರಿಗಳನ್ನು ಸನ್ನದ್ಧ ಇರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
Heavy rains in Mangalore, rivers flooded, bridges in danger, schools and colleges declared holiday due to red alert. The bathing platform in Kukke Subrahmanya was submerged as the Kumaradhara river was in spate following heavy rains in Western Ghat region. Pilgrims have been banned from getting down into the river for bathing and alternative arrangements have been made for the same.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am