ಬ್ರೇಕಿಂಗ್ ನ್ಯೂಸ್
30-07-24 08:36 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಕ್ಕಿ ಹರಿದಿವೆ. ಉಪ್ಪಿನಂಗಡಿಯಲ್ಲಿ ಇವರೆಡು ನದಿಗಳಲ್ಲಿ ಭಾರೀ ನೀರು ಬಂದಿದ್ದರಿಂದ ಅಪಾಯದ ಮಟ್ಟ ಮೀರಿ ಹರಿದಿದೆ. 29 ಮೀಟರ್ ಎತ್ತರಕ್ಕೂ ಹೆಚ್ಚಿನ ಮಟ್ಟದಲ್ಲಿ ನೀರು ಬಂದಿದ್ದರಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗಿದೆ. ಇದೇ ವೇಳೆ, ಜುಲೈ 31ರ ಮಂಗಳವಾರ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಉಪ್ಪಿನಂಗಡಿಯಲ್ಲಿ ಎರಡು ನದಿಗಳು ಸಂಗಮಗೊಳ್ಳುವುದರಿಂದ ಅತಿ ಹೆಚ್ಚು ನೀರು ಬಂದರೆ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗುತ್ತದೆ. ಅಷ್ಟರ ಮಟ್ಟಿಗೆ ನೀರು ಬಂದರೆ ಸಂಗಮ ಆಗುತ್ತದೆ ಎನ್ನುವುದು ನಂಬಿಕೆ. ರಾತ್ರಿ ವೇಳೆ ಬಹುತೇಕ ಸಂಗಮದ ಕ್ಷಣ ಎದುರಾಗುವ ಸಾಧ್ಯತೆಯಿದೆ. ಸೋಮವಾರ ಸಂಜೆ ಪುತ್ತೂರು ಶಾಸಕ ಅಶೋಕ್ ರೈ ಉಪ್ಪಿನಂಗಡಿ ದೇವಸ್ಥಾನಕ್ಕೆ ಬಂದು ನದಿಗೆ ಬಾಗಿನ ಅರ್ಪಿಸಿದ್ದಾರೆ.


















ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಪಾಣೆಮಂಗಳೂರು ಸೇತುವೆಗೆ ಮುಟ್ಟುವಷ್ಟು ನದಿಯಲ್ಲಿ ನೀರು ಬಂದಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುವ ಮನಮೋಹಕ ದೃಶ್ಯ ವೈರಲ್ ಆಗಿದೆ. ಬಂಟ್ವಾಳ ಆಸುಪಾಸಿನ ನಂದಾವರ, ಆಲಡ್ಕ, ಅಜಿಲಮೊಗರು, ಗೂಡಿನಬಳಿ ಹೀಗೆ ನೇತ್ರಾವತಿ ನದಿಯ ಇಕ್ಕೆಲಗಳಲ್ಲಿ ನದಿ ನೀರು ಗ್ರಾಮಗಳಿಗೆ ನುಗ್ಗಿದೆ. ಇದರಿಂದಾಗಿ ತಗ್ಗು ಪ್ರದೇಶದ ನಿವಾಸಿಗಳು ಮನೆಯನ್ನು ಬಿಟ್ಟು ಸುರಕ್ಷಿತ ಸ್ಥಳಗಳತ್ತ ತೆರಳಿದ್ದಾರೆ. ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ವಿಕೋಪ ನಿರ್ವಹಣಾ ತಂಡದ ಸದಸ್ಯರು ಬೋಟ್ ಸಹಿತ ರೆಡಿ ಮಾಡಿಟ್ಟುಕೊಂಡಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಆನಂತರ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಭಾರೀ ಮಳೆಯ ಕಾರಣದಿಂದ ಜಿಲ್ಲಾಡಳಿತದ ಅಧಿಕಾರಿಗಳನ್ನು ಸನ್ನದ್ಧ ಇರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
Heavy rains in Mangalore, rivers flooded, bridges in danger, schools and colleges declared holiday due to red alert. The bathing platform in Kukke Subrahmanya was submerged as the Kumaradhara river was in spate following heavy rains in Western Ghat region. Pilgrims have been banned from getting down into the river for bathing and alternative arrangements have been made for the same.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm