ಬ್ರೇಕಿಂಗ್ ನ್ಯೂಸ್
31-07-24 02:40 pm Mangalore Correspondent ಕರಾವಳಿ
ಉಡುಪಿ, ಜುಲೈ 31: ಕರಾವಳಿಯ ಯಕ್ಷಗಾನ ರಂಗದಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸೇವೆ ನೀಡಿದ್ದ ಗುರುಪ್ರಸಾದ್ ನೀರ್ಜೆಡ್ಡು 26 ವರ್ಷಕ್ಕೆ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.
ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜುಲೈ 27ರಂದು ಇಲಿ ಪಾಷಾಣ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ನಿನ್ನೆ (ಜುಲೈ 30) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು, ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಈಗಾಗಲೇ ಸೇವೆ ಸಲ್ಲಿಸಿದ್ದರು.
ಸ್ತ್ರೀವೇಷಧಾರಿಯಾಗಿ ತಮ್ಮ ಕುಣಿತ, ಮಾತು ಹಾಗೂ ಕಲೆಯಿಂದ ಅಪಾರ ಯಕ್ಷ ಅಭಿಮಾನಿಗಳನ್ನು ಹೊಂದಿದ್ದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಶರಣಾಗಿರುವು ಮಾತ್ರ ಶಾಕಿಂಗ್ ವಿಚಾರವಾಗಿದೆ. 12 ವರ್ಷ ಸ್ತ್ರೀ ವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು ಅವರು ತಾಯಿ, ತಮ್ಮ, ಸ್ನೇಹಿತರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನದ ಅಭಿಮಾನಿಗಳು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
Udupi Yakshagana artiste Guruprasad Neerjeddu dies by suicide. The deceased, Guruprasad Neerjeddu (26), had donned the female roles in Mandarthi, Madamakki, Amriteshwari, Saligrama and Marankatte Melas (troupes) for about 12 years.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm