ಬ್ರೇಕಿಂಗ್ ನ್ಯೂಸ್
31-07-24 08:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿ ದಿಢೀರ್ ಕುಸಿದು ಬಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ರೀತಿಯಲ್ಲಿ ಅತಿವೇಗದಲ್ಲಿ ಚಲಾಯಿಸಿ ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಘಟನೆ ನಗರದಲ್ಲಿ ನಡೆದಿದ್ದು, ಬಸ್ ಸಿಬಂದಿಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಮಂಗಳವಾರ ಸಂಜೆ ಕುಂಜತ್ತ್ ಬೈಲ್- ಮಂಗಳಾದೇವಿ ನಡುವೆ ಸಂಚರಿಸುವ 13- ಎಫ್ ನಂಬರಿನ ಖಾಸಗಿ ಬಸ್ಸಿನಲ್ಲಿ ಘಟನೆ ನಡೆದಿದೆ. ಸಂಜೆ ವೇಳೆಗೆ ಕುಳೂರಿನಿಂದ ಜ್ಯೋತಿಯತ್ತ ಬರುತ್ತಿದ್ದ ಯುವತಿಗೆ ಲೇಡಿಹಿಲ್ ತಲುಪಿದಾಗ ಅಸ್ವಸ್ಥತೆ ಉಂಟಾಗಿತ್ತು. ಪಿವಿಎಸ್ ತಲುಪಿದಾಗ ಕುಸಿದು ಬಿದ್ದಿದ್ದು, ಬಂಟ್ಸ್ ಹಾಸ್ಟೆಲ್, ಜ್ಯೋತಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಇದ್ದರೂ ಅಲರ್ಟ್ ಸೈರನ್ ಮೊಳಗಿಸುತ್ತಾ ಬಸ್ಸನ್ನು ನೇರವಾಗಿ ಕಂಕನಾಡಿಯತ್ತ ನುಗ್ಗಿಸಿದ್ದಾರೆ.





ಎಲ್ಲಿಯೂ ಪಿಕಪ್ ಮಾಡದೆ ಇಳಿಯುವುದಕ್ಕೆ ಮಾತ್ರ ಅವಕಾಶ ಕೊಟ್ಟು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯತ್ತ ಒಯ್ದು ಅಲ್ಲಿ ಯುವತಿಯನ್ನು ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾಗಿದ್ದಾರೆ. ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ನಿರ್ವಾಹಕ ಮಹೇಶ್ ಪೂಜಾರಿ ಅವರ ಕೆಲಸಕ್ಕೆ ಸಾರ್ವಜನಿಕರು ಶಹಭಾಷ್ ಹೇಳಿದ್ದಾರೆ. ತುರ್ತಾಗಿ ಯುವತಿಯನ್ನು ಆಸ್ಪತ್ರೆಗೆ ಒಯ್ದಿದ್ದರಿಂದ ಆಕೆ ಬದುಕುಳಿದಿದ್ದಾಳೆ ಎಂದು ತಿಳಿದುಬಂದಿದೆ.
Mangalore Krishna prasad city bus turns into ambulance, rushes medical emergency student to hospital. The bus on Route 13F was plying from Kunjathbail to Mangaladevi temple. Gajendra Kundar was driving while Mahesh Poojary was the conductor. Suresh, another driver who had to take over from Kundar, was also in the bus. The video of this has gone viral on social media
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm