ಬ್ರೇಕಿಂಗ್ ನ್ಯೂಸ್
01-08-24 02:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಫಲ್ಗುಣಿ ನದಿಯ ಹರಿಯುವ ಉದ್ದಕ್ಕೂ ನಿನ್ನೆ ರಾತ್ರಿ ದಿಢೀರ್ ನೆರೆ ಬಂದಿದೆ. ವೇಣೂರು, ಹೊಸಂಗಡಿ, ಪೊಳಲಿ ಸಮೀಪದ ಅಮ್ಮುಂಜೆ, ಉಳಾಯಿಬೆಟ್ಟು ಆಸುಪಾಸಿನಲ್ಲಿ ರಾತ್ರೋರಾತ್ರಿ ನೀರು ಉಕ್ಕಿ ಬಂದಿದ್ದು, ಪರಿಸರದ ಹಲವಾರು ಮನೆಗಳಿಗೆ ನುಗ್ಗಿದೆ. ಇದರಿಂದಾಗಿ ಜನರು ಮನೆ ಬಿಟ್ಟು ಹೊರಬಂದು ಪರದಾಟ ಅನುಭವಿಸಿದ್ದಾರೆ.
ಇತ್ತ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಇಳಿಕೆಯಾದರೂ, ಫಲ್ಗುಣಿ ನದಿಯಲ್ಲಿ ಮಾತ್ರ ನೆರೆ ಬಂದಿರುವುದು ಹೇಗೆ ಎಂಬ ಪ್ರಶ್ನೆ ಬಂದಿದೆ. ಗುರುಪುರದಲ್ಲಿ ಹೊಸ ಹೆದ್ದಾರಿಗೆ ಅವೈಜ್ಞಾನಿಕ ರೀತಿ ಮತ್ತು ತರಾತುರಿಯಲ್ಲಿ ಕಟ್ಟಲಾಗುತ್ತಿರುವ ಅಣೆಕಟ್ಟು ಹಾಗೂ ಕುಳೂರಿನಲ್ಲಿ ಎರಡು ವರ್ಷಗಳಿಂದಲೂ ಅಣೆಕಟ್ಟು ಸಲುವಾಗಿ ನದಿಗೆ ಮಣ್ಣು ತುಂಬಿದ್ದರಿಂದ ಈ ರೀತಿಯ ನೆರೆ ಬಂದಿದೆ ಎನ್ನಲಾಗುತ್ತಿದೆ.











ಹೊಸಂಗಡಿ, ವೇಣೂರಿನಲ್ಲಿ ಈ ರೀತಿ ನೆರೆ ಬಂದಿದ್ದು ಭಾರೀ ಕಡಿಮೆ. ಅಲ್ಲದೆ, ಪೊಳಲಿ ಆಸುಪಾಸಿನಲ್ಲಿಯೂ ನೆರೆ ಬಂದದ್ದಿಲ್ಲ. ಉಳಾಯಿಬೆಟ್ಟು ಪರಿಸರದಲ್ಲಿ ಹೆಚ್ಚು ಮಳೆಯಾದರೆ ಈ ಹಿಂದೆಯೂ ನೀರು ಉಕ್ಕಿ ಕೃಷಿಗೆ ನುಗ್ಗಿದ್ದಿದೆ. ಆದರೆ, ಫಲ್ಗುಣಿ ನದಿ ಹರಿಯುವ ಎಲ್ಲ ಕಡೆಯೂ ಈ ಬಾರಿ ನೆರೆ ಬಂದಿದೆ. ಅದ್ಯಪಾಡಿ ಬಳಿಯ ಮುಗೇರಕುದ್ರು ಎನ್ನುವ ಪ್ರದೇಶವಂತೂ ಒಂದು ತಿಂಗಳಿನಿಂದ ಮುಳುಗಡೆಯಾಗಿದೆ. ಅದಕ್ಕೆ ಅಲ್ಲಿನ ಅವೈಜ್ಞಾನಿಕ ಅಣೆಕಟ್ಟು ಕಾರಣವಾದರೆ, ಬೇರೆಲ್ಲ ಕಡೆ ದಿಢೀರ್ ನೆರೆ ನೀರು ಉಕ್ಕುವುದಕ್ಕೆ ಮಳೆ ಎಷ್ಟು ಕಾರಣವೋ, ಸೇತುವೆಯ ಕಾರಣಕ್ಕೆ ನದಿಗೆ ಮಣ್ಣು ತುಂಬಿಸಿರುವುದೂ ಅಷ್ಟೇ ಕಾರಣ.
ಪೊಳಲಿ, ಉಳಾಯಿಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ ಮನೆಗೆ ನೀರು ನುಗ್ಗಿದ್ದರಿಂದ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ವೇಣೂರು, ಹೊಸಂಗಡಿ ಪ್ರದೇಶದಲ್ಲಿ ಸ್ಥಳೀಯ ನಿವಾಸಿಗಳು ಮಹಿಳೆಯರು, ಮಕ್ಕಳು ನಿದ್ದೆ ಬಿಟ್ಟು ರಸ್ತೆಗೆ ಬಂದು ನಿಂತುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇದೇ ಏರಿಯಾದಲ್ಲಿ ರಸ್ತೆಗೆ ನೀರು ನುಗ್ಗಿದ್ದರಿಂದ ಬಸ್ ತೆರಳಲು ಸಾಧ್ಯವಾಗದೆ, ಸ್ಥಳೀಯರು ಅದರಲ್ಲಿದ್ದ ಜನರನ್ನು ಇಳಿಸಿ ಇನ್ನೊಂದು ಕಡೆಗೆ ದಾಟಿಸಿದ್ದಾರೆ. ಗುರವಾರ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಎಂದಿನ ರೀತಿಯಲ್ಲೇ ಪರಿಹಾರದ ಮಾತುಗಳನ್ನಾಡಿ ಬಂದಿದ್ದಾರೆ.
Mangalore heavy rain, palguni river water overflows, houses and tempele flooded with water. The water level of the Gurpur Phalguni river rose to dangerous levels due to the incessant rains lashing the city since Wednesday. Water gushed into the house of Arbee Didpe in Sanjeev early Thursday morning. Fire service personnel from Pandeshwar rushed to the spot.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am