ಬ್ರೇಕಿಂಗ್ ನ್ಯೂಸ್
02-08-24 10:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಚಳವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಾಂಗ್ರೆಸ್ ಸರಕಾರ ವಾಲ್ಮೀಕಿ ನಿಗಮದಲ್ಲಿದ್ದ 187 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಇದರ ಜೊತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮವಾಗಿ ಸೈಟ್ ಗಳನ್ನು ಪಡೆದು ಮತ್ತೊಂದು ದೊಡ್ಡ ಹಗರಣ ಮಾಡಿದ್ದಾರೆ. ತನ್ನ ಪತ್ನಿಯ ಹೆಸರಲ್ಲೇ ಹಗರಣ ನಡೆಸಿದ್ದು, ಮುಖ್ಯಮಂತ್ರಿ ರಾಜಿನಾಮೆಗೆ ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಪಾದಯಾತ್ರೆ ನಡೆಸಲಿದೆ. ಆಗಸ್ಟ್ 3ರಂದು ಬೆಂಗಳೂರಿನಿಂದ ಪಾದಯಾತ್ರೆ ಹೊರಟು 15ಕ್ಕೆ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದರು.

ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ಶಾಸಕರು, ಪ್ರಮುಖ ಪದಾಧಿಕಾರಿಗಳು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ. ಈಗಾಗಲೇ 200 ಮಂದಿಯಷ್ಟು ಕಾರ್ಯಕರ್ತರು ತೆರಳಿದ್ದು, ಅಲ್ಲಿನ ಸಿದ್ಧತೆಗೆ ಕೈಜೋಡಿಸಿದ್ದಾರೆ. ಆಗಸ್ಟ್ 7ರಂದು ದೊಡ್ಡ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ತೆರಳಲಿದ್ದು, ಅದಕ್ಕಾಗಿ ಬಸ್ಸಿನ ವ್ಯವಸ್ಥೆ ಮಾಡಿದ್ದೇವೆ. ಅಲ್ಲಿ ಹೋಗಿ ಉಳಿಯುವವರಿಗೆ ಪಕ್ಷದ ವತಿಯಿಂದ ವ್ಯವಸ್ಥೆ ಮಾಡಲಿದ್ದೇವೆ. ಅಂದು 2ರಿಂದ 3 ಸಾವಿರ ಕಾರ್ಯಕರ್ತರು ನಮ್ಮ ಜಿಲ್ಲೆಯಿಂದ ತೆರಳಲಿದ್ದಾರೆ. ಪಾದಯಾತ್ರೆ ಉದ್ದಕ್ಕೂ ಜಿಲ್ಲೆಯ ಕಾರ್ಯಕರ್ತರು ಜೊತೆಗಿರಲಿದ್ದಾರೆ ಎಂದರು.
ಜೆಡಿಎಸ್ ನಾಯಕರು ಅಪಸ್ವರ ತೆಗೆದಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕುಮಾರಸ್ವಾಮಿ ಅವರ ಜೊತೆಗೆ ನಮ್ಮ ಕೇಂದ್ರ ನಾಯಕರು ಮಾತುಕತೆ ನಡೆಸಿದ್ದಾರೆ. ಪಾದಯಾತ್ರೆಯನ್ನು ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಉದ್ಘಾಟನೆ ನಡೆಸಲಿದ್ದಾರೆ. ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನಜಾಗೃತಿ ಮೂಡಿಸುವುದು ಪಾದಯಾತ್ರೆ ಉದ್ದೇಶ. ಇದಕ್ಕಾಗಿ ನಾವೆಲ್ಲ ಜೊತೆಯಾಗಿದ್ದೇವೆ ಎಂದರು. ಸುದ್ದಿಗೋಷ್ಟಿಯಲ್ಲಿ ಯತೀಶ್ ಆರ್ವಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂಜಯ ಪ್ರಭು ಇದ್ದರು.
5 thousand bjp members to join Mysuru chalo from Dakshina Kannada says Satish Kumpala in Mangalore.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm