ಬ್ರೇಕಿಂಗ್ ನ್ಯೂಸ್
02-08-24 11:16 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಓ ಡಾ. ಆನಂದ್ ಮತ್ತಿತರರು ಇದ್ದರು.
ಇದಕ್ಕೂ ಮುನ್ನ ಸಂಜೆ ವೇಳೆಗೆ ಮಳೆ ಪೀಡಿತ ಪ್ರದೇಶಗಳ ಭೇಟಿ ಬಳಿಕ ಸುದ್ದಿ ಮಾಧ್ಯಮಕ್ಕೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಅದ್ಯಪಾಡಿಯಲ್ಲಿ ನೀರು ನಿಲ್ಲುತ್ತಿರುವುದಕ್ಕೆ ಚೆಕ್ ಡ್ಯಾಮ್ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ನಮಗೆ ಪರಿಹಾರ ಬೇಡ, ಶಾಶ್ವತ ಪರಿಹಾರ ಬೇಕು ಎಂದು ಹೇಳಿದ್ದಾರೆ. ಅವರಿಗೆ ಕೃಷಿ ನಷ್ಟ ಆಗಿರುವ ಬಗ್ಗೆ ಪರಿಹಾರ ಪಡೆಯುವಂತೆ ಮನವೊಲಿಸಿದ್ದೇನೆ. ಚೆಕ್ ಡ್ಯಾಮ್ ಸಮಸ್ಯೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧ್ಯಯನ ಸಮಿತಿ ನಡೆಸಲು ಸೂಚಿಸಿದ್ದೇನೆ. ಸಮಿತಿ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆತ್ತಿಕಲ್ ಗುಡ್ಡ ಕುಸಿತದ ಬಗ್ಗೆ ಪರಿಶೀಲನೆ ನಡೆಸಲು ಐಐಟಿ ತಜ್ಞರು ಶಿರೂರಿನಲ್ಲಿ ಅಧ್ಯಯನ ಮುಗಿಸಿ ಇಲ್ಲಿಗೆ ಬರಲಿದ್ದಾರೆ. ಹೆದ್ದಾರಿ ಅಲೈನ್ಮೆಂಟ್ ಬದಲಾವಣೆ ಮಾಡಿರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಆ ರೀತಿ ಗುಡ್ಡ ಕಡಿತ ಮಾಡುವಾಗ ಅಧಿಕಾರಿಗಳಿಗೆ ಗೊತ್ತಾಗಿಲ್ಲ ಎನ್ನುವುದು ವೈಫಲ್ಯ ಎನ್ನಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವಾಗ ಅವರಿಗೂ ಜವಾಬ್ದಾರಿ ಇದೆ. ಗುಡ್ಡವನ್ನು ಅಗೆದು ಅಪಾಯಕಾರಿ ರೀತಿ ಮಾಡಿಟ್ಟಿದ್ದಾರೆ. ಕುಸಿತ ತಡೆಯುವ ದೃಷ್ಟಿಯಿಂದ ಏನು ಕ್ರಮ ಆಗಬೇಕೋ ಅದನ್ನು ಮಾಡುತ್ತೇವೆ. ತಜ್ಞರ ವರದಿ ಆಧರಿಸಿ ಯಾರು ನಿರ್ಲಕ್ಷ್ಯ ವಹಿಸಿದ್ದಾರೆ ಎಲ್ಲವೂ ತಿಳಿಯಲಿದೆ. ಹೆದ್ದಾರಿಗೆ ಪರ್ಯಾಯ ವ್ಯವಸ್ಥೆ ಮಾಡೋಣ ಎಂದು ಹೇಳಿದರು.
Dinesh Gundu Rao orders to stop working of excavating ground due to rains in Mangalore.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm