ಬ್ರೇಕಿಂಗ್ ನ್ಯೂಸ್
03-08-24 11:11 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳ ಬಗ್ಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಇತರೇ ಆರೋಪಿಗಳಿಗೆ ಕೃತ್ಯ ಎಸಗಲು ತರಬೇತಿ ನೀಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದ ಮನ್ಸೂರ್ ಪಾಷಾ ಮತ್ತು ರಿಯಾಜ್ ವೈ.ಎಚ್ ಎಂಬವರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ಎರಡು ವರ್ಷಗಳಿಂದ ತಪ್ಪಿಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಸಕಲೇಶಪುರದ ಕಾಫಿ ಎಸ್ಟೇಟ್ ನಿಂದ ಪತ್ತೆ ಮಾಡಲಾಗಿತ್ತು. ಆತ ತನ್ನ ನಿಜ ಹೆಸರು ಮುಚ್ಚಿಟ್ಟು ಅಡಗಿಕೊಳ್ಳಲು ಮನ್ಸೂರ್ ಪಾಷಾ ಸಹಕಾರ ನೀಡಿದ್ದ. ಮುಸ್ತಫಾನನ್ನು ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮನ್ಸೂರ್ ನನ್ನೂ ಬಂಧಿಸಲಾಗಿತ್ತು. ಇದೀಗ ಆತನ ಪಾತ್ರ ಮತ್ತು ಕೊಲೆ ಪ್ರಕರಣದಲ್ಲಿ ಸಹಕಾರ ನೀಡಿದ ವಿಚಾರವನ್ನು ಅಧಿಕಾರಿಗಳು ಪಟ್ಟಿ ಮಾಡಿದ್ದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇನ್ನೊಬ್ಬ ಆರೋಪಿ ರಿಯಾಜ್ ಕೂಡ ಮುಸ್ತಫಾ ತಪ್ಪಿಸಿಕೊಳ್ಳಲು ನೆರವು ನೀಡಿದ್ದ ಎನ್ನಲಾಗಿದ್ದು, ಜೂನ್ 6ರಂದು ಮುಂಬೈ ಏರ್ಪೋರ್ಟ್ ಮೂಲಕ ವಿದೇಶಕ್ಕೆ ಹಾಲು ಯತ್ನಿಸುತ್ತಿದ್ದಾಗಲೇ ಬಂಧಿತನಾಗಿದ್ದ, ಇದೀಗ ರಿಯಾಜ್ ವಿರುದ್ಧವೂ ಎನ್ಐಎ ಅಧಿಕಾರಿಗಳು ಚಾರ್ಜ್ ಶೀಟ್ ಹಾಕಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಈವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಏಳು ಮಂದಿ ತಲೆತಪ್ಪಿಸಿಕೊಂಡಿದ್ದು, ಅವರ ಸುಳಿವು ಕೊಟ್ಟವರಿಗೆ ತಲಾ 5 ಮತ್ತು 2 ಲಕ್ಷದ ಬಹುಮಾನ ಘೋಷಣೆ ಮಾಡಲಾಗಿದೆ. 2022ರ ಜುಲೈ 27ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಕಡಿದು ಕೊಲೆ ಮಾಡಲಾಗಿತ್ತು. ಹಿಂದುಗಳನ್ನು ಭಯ ಪಡಿಸುವ ಉದ್ದೇಶದಿಂದ ಪಿಎಫ್ಐ ಸಂಘಟನೆ ಪೂರ್ವ ನಿಯೋಜಿತವಾಗಿ ಈ ಕೃತ್ಯವನ್ನು ಎಸಗಿತ್ತು ಎನ್ನೋದು ತನಿಖೆಯಲ್ಲಿ ಕಂಡುಬಂದಿತ್ತು.
The National Investigation Agency (NIA) has filed a supplementary chargesheet against two accused for harbouring Mustafa Paichar, the key conspirator in the murder of Praveen Nettaru, a BJP Yuva Morcha leader.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm