ಬ್ರೇಕಿಂಗ್ ನ್ಯೂಸ್
03-08-24 11:11 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳ ಬಗ್ಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಇತರೇ ಆರೋಪಿಗಳಿಗೆ ಕೃತ್ಯ ಎಸಗಲು ತರಬೇತಿ ನೀಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದ ಮನ್ಸೂರ್ ಪಾಷಾ ಮತ್ತು ರಿಯಾಜ್ ವೈ.ಎಚ್ ಎಂಬವರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ಎರಡು ವರ್ಷಗಳಿಂದ ತಪ್ಪಿಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಸಕಲೇಶಪುರದ ಕಾಫಿ ಎಸ್ಟೇಟ್ ನಿಂದ ಪತ್ತೆ ಮಾಡಲಾಗಿತ್ತು. ಆತ ತನ್ನ ನಿಜ ಹೆಸರು ಮುಚ್ಚಿಟ್ಟು ಅಡಗಿಕೊಳ್ಳಲು ಮನ್ಸೂರ್ ಪಾಷಾ ಸಹಕಾರ ನೀಡಿದ್ದ. ಮುಸ್ತಫಾನನ್ನು ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮನ್ಸೂರ್ ನನ್ನೂ ಬಂಧಿಸಲಾಗಿತ್ತು. ಇದೀಗ ಆತನ ಪಾತ್ರ ಮತ್ತು ಕೊಲೆ ಪ್ರಕರಣದಲ್ಲಿ ಸಹಕಾರ ನೀಡಿದ ವಿಚಾರವನ್ನು ಅಧಿಕಾರಿಗಳು ಪಟ್ಟಿ ಮಾಡಿದ್ದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇನ್ನೊಬ್ಬ ಆರೋಪಿ ರಿಯಾಜ್ ಕೂಡ ಮುಸ್ತಫಾ ತಪ್ಪಿಸಿಕೊಳ್ಳಲು ನೆರವು ನೀಡಿದ್ದ ಎನ್ನಲಾಗಿದ್ದು, ಜೂನ್ 6ರಂದು ಮುಂಬೈ ಏರ್ಪೋರ್ಟ್ ಮೂಲಕ ವಿದೇಶಕ್ಕೆ ಹಾಲು ಯತ್ನಿಸುತ್ತಿದ್ದಾಗಲೇ ಬಂಧಿತನಾಗಿದ್ದ, ಇದೀಗ ರಿಯಾಜ್ ವಿರುದ್ಧವೂ ಎನ್ಐಎ ಅಧಿಕಾರಿಗಳು ಚಾರ್ಜ್ ಶೀಟ್ ಹಾಕಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಈವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಏಳು ಮಂದಿ ತಲೆತಪ್ಪಿಸಿಕೊಂಡಿದ್ದು, ಅವರ ಸುಳಿವು ಕೊಟ್ಟವರಿಗೆ ತಲಾ 5 ಮತ್ತು 2 ಲಕ್ಷದ ಬಹುಮಾನ ಘೋಷಣೆ ಮಾಡಲಾಗಿದೆ. 2022ರ ಜುಲೈ 27ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಕಡಿದು ಕೊಲೆ ಮಾಡಲಾಗಿತ್ತು. ಹಿಂದುಗಳನ್ನು ಭಯ ಪಡಿಸುವ ಉದ್ದೇಶದಿಂದ ಪಿಎಫ್ಐ ಸಂಘಟನೆ ಪೂರ್ವ ನಿಯೋಜಿತವಾಗಿ ಈ ಕೃತ್ಯವನ್ನು ಎಸಗಿತ್ತು ಎನ್ನೋದು ತನಿಖೆಯಲ್ಲಿ ಕಂಡುಬಂದಿತ್ತು.
The National Investigation Agency (NIA) has filed a supplementary chargesheet against two accused for harbouring Mustafa Paichar, the key conspirator in the murder of Praveen Nettaru, a BJP Yuva Morcha leader.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm