ಬ್ರೇಕಿಂಗ್ ನ್ಯೂಸ್
03-08-24 01:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.3: ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ನಿಗಮದ ಇಲಾಖೆಯಲ್ಲಿ ಹಗರಣ ಆಗಿದೆ, ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೂ ಪಾದಯಾತ್ರೆ ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತಾಡಿದ ಅವರು, ಸುಧಾಕರ್ ಕೊರೋನಾ ಹೆಸರಲ್ಲಿ ನೂರಾರು ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ, ಬೊಮ್ಮಾಯಿ ಖುದ್ದು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಅವರ ಮನೆಗೆ ಯಾಕೆ ಬಿಜೆಪಿಗರು ಪಾದಯಾತ್ರೆ ಮಾಡುವುದಿಲ್ಲ? ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಅದರ ಮುಂದುವರಿದ ಭಾಗವೇ ಈ ಪಾದಯಾತ್ರೆ ಎಂದರು.
ವಾಲ್ಮೀಕಿ ಹಗರಣದಲ್ಲಿ ಬಂಧಿತರಾದವರಿಗೆ ಉದ್ದೇಶಪೂರ್ವಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹೇಳುವಂತೆ ಬೆದರಿಕೆ ಹಾಕಲಾಗುತ್ತಿದೆ. ರಾಜ್ಯದ ಜನರಲ್ಲಿ ಸರಕಾರ ಬೀಳುತ್ತದೆ ಎಂದು ಗುಲ್ಲೆಬ್ಬಿಸಿ ದಾರಿ ತಪ್ಪಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನೂ ಭ್ರಷ್ಟಾಚಾರಿ ಎಂದು ಬಿಂಬಿಸಲು ಹೊರಟಿದ್ದಾರೆ. ಇದಕ್ಕಾಗಿ ಪಾದಯಾತ್ರೆ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಕಾಲದ ಹಗರಣ ಬಗ್ಗೆ ತನಿಖೆ ನಡೆಸುತ್ತಿದ್ದು ಕೋಟ ಶ್ರೀನಿವಾಸ ಪೂಜಾರಿ ಸಹಿತ ಎಲ್ಲರನ್ನು ಜೈಲಿಗೆ ಕಳುಹಿಸುತ್ತೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಅಶ್ರಫ್ ಕೆ, ಪ್ರಕಾಶ್ ಸಾಲಿಯಾನ್, ವಿಕಾಸ್ ಶೆಟ್ಟಿ, ಅಪ್ಪಿ, ಸತೀಶ್ ಪೆಂಗಲ್, ಭಾಸ್ಕರ್ ರಾವ್, ಎಂ ಪಿ ಮನುರಾಜ್, ಇಮ್ರಾನ್ ಎ.ಆರ್, ಪ್ರೇಮ್ ಬಲ್ಲಾಳ್ ಬಾಗ್, ಕಿರಣ್ ಬುಡ್ಲೆಗುತ್ತು, ಮೀನಾ ಟೆಲಿಸ್, ಅಬ್ದುಲ್ ಸಲೀಂ ಮತ್ತಿತರರು ಉಪಸ್ಥಿತರಿದ್ದರು.
BJP should do padayatra to sudhakar, bommais house, Slams Ivan Dsouza in Mangalore. BJP state President BY Vijayendra and his family visited the Chamundeshwari temple in Mysore before embarking on the padayatra. Vijayendra emphasized that the opposition's struggle is focused on representing the people's voice and protecting their rights.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am