ಬ್ರೇಕಿಂಗ್ ನ್ಯೂಸ್
03-08-24 10:51 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದರು.
ಸುದ್ದಿಗೋಷ್ಟಿ ನಡೆಸಿದ ಶಾಸಕ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮನೆಗಳು ಕುಸಿದು ಬಿದ್ದಿವೆ. ಜಿಲ್ಲೆಯಲ್ಲಿ ಮನೆಹಾನಿ, ಕೃಷಿ ಹಾನಿ ವ್ಯಾಪಕವಾಗಿದ್ದು ರಾಜ್ಯ ಸರ್ಕಾರ ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಂಡು ಪರಿಹಾರ ಒದಗಿಸಬೇಕು ಎಂದು ಹೇಳಿದರು.
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ, ಭಾಗಶಃ ಹಾನಿಯಾಗಿದ್ದರೆ 2.50 ಲಕ್ಷ, ನೀರು ನುಗ್ಗಿದ್ದರೆ 10000 ಪರಿಹಾರ ನೀಡಿದ್ದರು. ಈಗಿನ ಸರಕಾರ ದಿವಾಳಿಯಾಗಿದ್ದು ಪರಿಹಾರ ಕೊಡಲು ಹಣ ಇಲ್ಲದ ಸ್ಥಿತಿಯಾಗಿದೆ. ಕೊನೆಪಕ್ಷ ಎನ್ ಡಿಆರ್ ಎಫ್ ವತಿಯಿಂದ ನೀಡಲಾಗುವ ಪರಿಹಾರ ಆದ್ರೂ ಕೊಡಿ ಎಂದು ಒತ್ತಾಯಿಸಿದರು.
ನಾವು ಶಾಸಕರಾಗಿ 15 ತಿಂಗಳಾಗುತ್ತ ಬಂದಿದ್ದು ಒಂದು ರುಪಾಯಿನೂ ಅನುದಾನ ಸಿಕ್ಕಿಲ್ಲ. ಯಾವುದೇ ಶಾಸಕನಿಗೂ ನಯಾಪೈಸೆ ಅನುದಾನ ಬಿಡುಗಡೆ ಆಗಿಲ್ಲ. ಆಡಳಿತ ಪಕ್ಷದ ಶಾಸಕನಿಗೂ ಭರವಸೆ ಸಿಕ್ಕಿದ್ದು ಬಿಟ್ಟರೆ ಅನುದಾನ ಲಭಿಸಿಲ್ಲ. ಕ್ಷೇತ್ರದ ಅನುದಾನವೆಂದು ವರ್ಷಕ್ಕೆ ಎರಡು ಕೋಟಿ ಕೊಡಬೇಕು. ಆದರೆ ಅದನ್ನೂ ಕೊಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ. ನಾವು ಅನುದಾನಕ್ಕಾಗಿ ಎಲ್ಲ ಶಾಸಕರು ಸೇರಿ ಧರಣಿ ನಡೆಸಲಿದ್ದೇವೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಮಾಡುವುದಾಗಿ ವೇದವ್ಯಾಸ ಕಾಮತ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಸಂಜಯ್ ಪ್ರಭು, ಪೂರ್ಣಿಮಾ, ರಮೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
MLA Vedavyas Kamath demanded that the state government release a Rs 300 crore special package to Dakshina Kannada (DK), as heavy rains have caused severe damage in the district.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm