ಬ್ರೇಕಿಂಗ್ ನ್ಯೂಸ್
06-08-24 10:32 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಜನರ ಆಡುಭಾಷೆ ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಕುರಿತಾಗಿ ಸಂಸತ್ತಿನಲ್ಲಿ ಪ್ರಶ್ನೆ ಕೇಳಿ ಮಾಹಿತಿ ಪಡೆದಿದ್ದಾರೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ಮತ್ತು ಸರ್ಕಾರ ಈ ಬಗೆಗೆ ಯಾವೆಲ್ಲ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ.
ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಯ ಪ್ರಯತ್ನಗಳನ್ನು ಗಮನದಲ್ಲಿಟ್ಟು ಸಂವಿಧಾನದ ಎಂಟನೇ ಪರಿಚ್ಛೇದದ ಅಡಿಯಲ್ಲಿ ಹೆಚ್ಚಿನ ಭಾಷೆಗಳ ಪರಿಗಣಿಸಲು ಯಾವೆಲ್ಲಾ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೇ ಅವರು, ತುಳು ಸೇರಿದಂತೆ ಇನ್ನಿತರ ಹಲವಾರು ಭಾಷೆಗಳನ್ನು ಎಂಟನೇ ಶೆಡ್ಯೂಲ್ಗೆ ಸೇರಿಸಲು ಕಾಲ ಕಾಲಕ್ಕೆ ಬೇಡಿಕೆಗಳು ಬರುತ್ತಿವೆ, ಆದರೆ ಯಾವುದೇ ಭಾಷೆಯನ್ನು ಸಂವಿಧಾನದ ಎಂಟನೇ ಶೆಡ್ಯೂಲ್ಗೆ ಸೇರಿಸಲು ಯಾವುದೇ ಸ್ಥಿರ ಮಾನದಂಡಗಳಿಲ್ಲ. ಉಪಭಾಷೆಗಳು ಮತ್ತು ಭಾಷೆಗಳ ವಿಕಸನವು ಕ್ರಿಯಾತ್ಮಕ ಪ್ರಕ್ರಿಯೆಯಾಗಿದ್ದು ಇದರ ಅಭಿವೃದ್ಧಿಯು ಸಾಮಾಜಿಕ - ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುತ್ತದೆ.
ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಲು ಭಾಷೆಗಳಿಗೆ ನಿರ್ದಿಷ್ಟ ಮಾನದಂಡವನ್ನು ನಿಗದಿಪಡಿಸುವುದು ಕಷ್ಟಕರವಾಗಿದೆ. ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಗಳ ಮೂಲಕ ನಿಶ್ಚಿತ ಮಾನದಂಡಗಳನ್ನ ನಿಗದಿಪಡಿಸಲು ಪ್ರಯತ್ನ ನಡೆದಿತ್ತಾದರೂ ಅದು ಸಾಧ್ಯವಾಗಿಲ್ಲ. ಆಯಾ ಭಾಗದ ಜನರ ಭಾವನೆಗಳನ್ನು ಪರಿಗಣಿಸಿ ಇತರ ಭಾಷೆಗಳನ್ನು 8ನೇ ಶೆಡ್ಯೂಲ್ಗೆ ಸೇರಿಸುವ ಪ್ರಸ್ತಾಪಕ್ಕೆ ಸರ್ಕಾರದ ಸಹಮತ ಇದೆ ಎಂದಿದ್ದಾರೆ.
ಈಗಾಗಲೇ 22 ಭಾಷೆಗಳನ್ನು ಸಂವಿಧಾನಕ್ಕೆ ಸೇರ್ಪಡೆ ಮಾಡಿದ್ದು ತುಳುವನ್ನು ಸೇರಿಸಬೇಕೆಂಬ ಹಕ್ಕೊತ್ತಾಯ ಕರಾವಳಿಯಲ್ಲಿ ಹೆಚ್ಚಿದೆ.
Dakshina Kannada MP Captain Brijesh Chowta has raised a question in Parliament on the inclusion of Tulu, the dialect of the coastal people, in the Eighth Schedule of the Constitution. "Has it come to the notice of the government that the people of Dakshina Kannada, Udupi and Kasaragod are demanding the inclusion of Tulu language in the 8th schedule and what steps have been taken by the government in this regard?" he asked.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am