ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm