ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am