ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm