ಬ್ರೇಕಿಂಗ್ ನ್ಯೂಸ್
10-08-24 12:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿಯಾಗಲ್ಲ ಎಂಬುದು ಬಹಳಷ್ಟು ಬಾರಿ ಸಾಬೀತಾಗಿದೆ. ಇದಕ್ಕೊಂದು ಸೇರ್ಪಡೆ ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆ. ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಲ್ಲಿ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ನೆರವೇರಿದೆ.
ಮಂಗಳೂರಿನ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. 2019ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. 2023ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
In a heartwarming celebration of love transcending borders, a Mangalurean man and a Brazilian woman were married on Thursday, August 8, at T V Raman Pai Hall. This union not only marks the culmination of a five-year courtship but also beautifully blends two rich and diverse cultures, creating a joyous occasion that has touched many hearts.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm