ಬ್ರೇಕಿಂಗ್ ನ್ಯೂಸ್
11-08-24 04:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇ ರಾಜಧಾನಿ ಅಬುಧಾಬಿಗೆ ಇಂಡಿಗೋ ಸಂಸ್ಥೆ ಪ್ರತಿದಿನ ನೇರ ವಿಮಾನ ಹಾರಾಟ ಆರಂಭಿಸಿದೆ.
ಆಗಸ್ಟ್ 9 ರಿಂದ ಇಂಡಿಗೋದಿಂದ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದುಬೈ ನಂತರ ಮಂಗಳೂರಿನಿಂದ ಪ್ರತಿದಿನ ವಿಮಾನ ಸಂಚಾರದ ಎರಡನೇ ಸಾಗರೋತ್ತರ ತಾಣ ಇದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಎಂಟು ಮಧ್ಯಪ್ರಾಚ್ಯ ಸ್ಥಳಗಳಿಗೆ ಮತ್ತು ಆರು ದೇಶೀಯ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಬುಧಾಬಿ ನೇರ ವಿಮಾನದ ಉದ್ಘಾಟನಾ ಯಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ ಫ್ಲೈಯರ್ ನಂದಿಕಾ ಉಡಾವಣಾ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು. ಮಂಗಳೂರು ವಿಮಾನ ನಿಲ್ದಾಣ ಮತ್ತು ಏರ್ಲೈನ್ಸ್ ತಂಡದೊಂದಿಗೆ ಸಾಂಪ್ರದಾಯಿಕ ದೀಪವನ್ನು ಬೆಳಗಿಸುವ ಅವಕಾಶವನ್ನು ನಂದಿಕಾ ಪಡೆದರು. ಮೊದಲ ಬೋರ್ಡಿಂಗ್ ಪಾಸ್ ಮತ್ತು ಏರ್ಲೈನ್ ಬ್ಯಾಗ್ ಅನ್ನು ಆಕೆ ಪಡೆದರು.
ಬಳಿಕ ಕೇಕ್ ಕತ್ತರಿಸುವ ಕಾರ್ಯ ಮಕಕ್ರಮದಲ್ಲೂ ನಂದಿಕಾಗೆ ಅವಕಾಶ ದೊರೆಯಿತು. ಕ್ಯಾಪ್ಟನ್ ವಿಕರ್ ಯಾಸೀನ್ ನೇತೃತ್ವದ ವಿಮಾನ ಇತರ ಪ್ರಯಾಣಿಕರೊಂದಿಗೆ ಅಬುಧಾಬಿಗೆ ರಾತ್ರಿ 9.40 ಗಂಟೆಗೆ ಹೊರಟಿತು. ಇದರೊಂದಿಗೆ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಬುಧಾಬಿಗೆ ಎರಡು ದೈನಂದಿನ ವಿಮಾನಗಳನ್ನು ಹೊಂದಿದೆ. ಏರ್ ಇಂಡಿಯಾ ಸಂಸ್ಥೆಯಿಂದ ಈಗಾಗಲೇ ಮಂಗಳೂರಿನಿಂದ ಗಲ್ಫ್ ರಾಷ್ಟ್ರಕ್ಕೆ ವಿಮಾನ ಸಂಚಾರ ಇದೆ.
IndiGo has started daily direct flights from Mangalore International Airport to Abu Dhabi, the capital of UAE.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm