ಬ್ರೇಕಿಂಗ್ ನ್ಯೂಸ್
13-08-24 12:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ರಾಜ್ಯ ಶಿಕ್ಷಣ ಇಲಾಖೆ ಅನುದಾನ ರಹಿತ ಖಾಸಗಿ ಶಾಲೆಗಳ ಮೇಲೆ ಸವಾರಿ ನಡೆಸುತ್ತಿದ್ದು ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿನಾಕಾರಣ ಖಾಸಗಿ ಸಂಸ್ಥೆಗಳಿಗೆ ತೊಂದರೆ ನೀಡುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಆ.21ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಒಂದು ದಿನ ಶಾಲೆ ಮುಚ್ಚಿ ಆಡಳಿತ ಮಂಡಳಿ, ಶಾಲಾ ಸಿಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ “ಬೆಂಗಳೂರು ಚಲೋ’ ನಡೆಸಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ )ಕರ್ನಾಟಕದ ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುಮಾರು 64 ಮಾಹಿತಿಗಳನ್ನು ಒದಗಿಸಬೇಕಾಗಿದ್ದು, ಇವುಗಳಿಗೆ ಭಾರೀ ಶುಲ್ಕ ಪಾವತಿಸಬೇಕಾಗಿದೆ. ಅದರಲ್ಲೂ ಅಗ್ನಿ ಸುರಕ್ಷೆ ಬಗ್ಗೆ ದೃಢೀಕರಣ, ಕಟ್ಟಡ ಸುರಕ್ಷೆ ದೃಢೀಕರಣ ಹಾಗೂ ಶಾಲಾ ಕಟ್ಟಡವಿರುವ ನಿವೇಶನವು ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನಾ ಆದೇಶ ಇವುಗಳು ಖಾಸಗಿಯವರಿಗೆ ತೀವ್ರ ಸಂಕಷ್ಟ ತಂದಿದೆ. ಅವುಗಳನ್ನು ಸಡಿಲಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರಕಾರ ತಿರಸ್ಕರಿಸಿದೆ ಎಂದು ಆರೋಪಿಸಿದರು.
ಯಾವುದೇ ಜಾಗದಲ್ಲಿ ಶಾಲೆಗೆ ಕಟ್ಟಡವಿದ್ದರೂ ತೆರಿಗೆ ವಿಧಿಸುವಂತಿಲ್ಲ. ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಕೋರ್ಟ್ ಆದೇಶವಿದೆ. ಆದರೂ ತೆರಿಗೆ ವಸೂಲಾತಿ ನಡೆಸಲಾಗುತ್ತಿದೆ. ಮನವಿ ಸಲ್ಲಿಸಿ ಮೇಲಧಿಕಾರಿಗಳು ಒಪ್ಪಿದರೂ ಕಾರ್ಯಗತವಾಗುವುದಿಲ್ಲ. ಅಲ್ಲದೆ, ತೆರಿಗೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ.ಕ., ಉಡುಪಿ ಘಟಕದ ಜಿಲ್ಲಾಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಮಾತನಾಡಿ, ಸರಕಾರಿ ಶಾಲೆಗಳಿಗೊಂದು ಖಾಸಗಿ ಶಾಲೆಗಳಿಗೊಂದು ನೀತಿಯನ್ನು ಇಲಾಖೆ ಅನುಸರಿಸುತ್ತಿರುವುದು ಸರಿಯಲ್ಲ. ಶಾಲಾ ಕಟ್ಟಡವಿರುವ ನಿವೇಶನದ ಭೂ ಪರಿವರ್ತನಾ ಆದೇಶದ ಬಗ್ಗೆ ವಿನಾಯಿತಿ ನೀಡಬೇಕು. ಅಲ್ಲದೆ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಿ ಆಯ್ದ ಮಕ್ಕಳನ್ನು ಟ್ಯೂಷನ್ ನೀಡುತ್ತಿರುವ ಟ್ಯುಟೋರಿಯಲ್ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
Mangalore Puranik says private school face renewal issues, warns of Bangalore chalo
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm