ಬ್ರೇಕಿಂಗ್ ನ್ಯೂಸ್
13-08-24 12:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ರಾಜ್ಯ ಶಿಕ್ಷಣ ಇಲಾಖೆ ಅನುದಾನ ರಹಿತ ಖಾಸಗಿ ಶಾಲೆಗಳ ಮೇಲೆ ಸವಾರಿ ನಡೆಸುತ್ತಿದ್ದು ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿನಾಕಾರಣ ಖಾಸಗಿ ಸಂಸ್ಥೆಗಳಿಗೆ ತೊಂದರೆ ನೀಡುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಆ.21ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಒಂದು ದಿನ ಶಾಲೆ ಮುಚ್ಚಿ ಆಡಳಿತ ಮಂಡಳಿ, ಶಾಲಾ ಸಿಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ “ಬೆಂಗಳೂರು ಚಲೋ’ ನಡೆಸಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ )ಕರ್ನಾಟಕದ ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುಮಾರು 64 ಮಾಹಿತಿಗಳನ್ನು ಒದಗಿಸಬೇಕಾಗಿದ್ದು, ಇವುಗಳಿಗೆ ಭಾರೀ ಶುಲ್ಕ ಪಾವತಿಸಬೇಕಾಗಿದೆ. ಅದರಲ್ಲೂ ಅಗ್ನಿ ಸುರಕ್ಷೆ ಬಗ್ಗೆ ದೃಢೀಕರಣ, ಕಟ್ಟಡ ಸುರಕ್ಷೆ ದೃಢೀಕರಣ ಹಾಗೂ ಶಾಲಾ ಕಟ್ಟಡವಿರುವ ನಿವೇಶನವು ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನಾ ಆದೇಶ ಇವುಗಳು ಖಾಸಗಿಯವರಿಗೆ ತೀವ್ರ ಸಂಕಷ್ಟ ತಂದಿದೆ. ಅವುಗಳನ್ನು ಸಡಿಲಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರಕಾರ ತಿರಸ್ಕರಿಸಿದೆ ಎಂದು ಆರೋಪಿಸಿದರು.
ಯಾವುದೇ ಜಾಗದಲ್ಲಿ ಶಾಲೆಗೆ ಕಟ್ಟಡವಿದ್ದರೂ ತೆರಿಗೆ ವಿಧಿಸುವಂತಿಲ್ಲ. ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಕೋರ್ಟ್ ಆದೇಶವಿದೆ. ಆದರೂ ತೆರಿಗೆ ವಸೂಲಾತಿ ನಡೆಸಲಾಗುತ್ತಿದೆ. ಮನವಿ ಸಲ್ಲಿಸಿ ಮೇಲಧಿಕಾರಿಗಳು ಒಪ್ಪಿದರೂ ಕಾರ್ಯಗತವಾಗುವುದಿಲ್ಲ. ಅಲ್ಲದೆ, ತೆರಿಗೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ.ಕ., ಉಡುಪಿ ಘಟಕದ ಜಿಲ್ಲಾಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಮಾತನಾಡಿ, ಸರಕಾರಿ ಶಾಲೆಗಳಿಗೊಂದು ಖಾಸಗಿ ಶಾಲೆಗಳಿಗೊಂದು ನೀತಿಯನ್ನು ಇಲಾಖೆ ಅನುಸರಿಸುತ್ತಿರುವುದು ಸರಿಯಲ್ಲ. ಶಾಲಾ ಕಟ್ಟಡವಿರುವ ನಿವೇಶನದ ಭೂ ಪರಿವರ್ತನಾ ಆದೇಶದ ಬಗ್ಗೆ ವಿನಾಯಿತಿ ನೀಡಬೇಕು. ಅಲ್ಲದೆ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಿ ಆಯ್ದ ಮಕ್ಕಳನ್ನು ಟ್ಯೂಷನ್ ನೀಡುತ್ತಿರುವ ಟ್ಯುಟೋರಿಯಲ್ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
Mangalore Puranik says private school face renewal issues, warns of Bangalore chalo
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm