ಬ್ರೇಕಿಂಗ್ ನ್ಯೂಸ್
13-08-24 12:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ರಾಜ್ಯ ಶಿಕ್ಷಣ ಇಲಾಖೆ ಅನುದಾನ ರಹಿತ ಖಾಸಗಿ ಶಾಲೆಗಳ ಮೇಲೆ ಸವಾರಿ ನಡೆಸುತ್ತಿದ್ದು ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿನಾಕಾರಣ ಖಾಸಗಿ ಸಂಸ್ಥೆಗಳಿಗೆ ತೊಂದರೆ ನೀಡುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಆ.21ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಒಂದು ದಿನ ಶಾಲೆ ಮುಚ್ಚಿ ಆಡಳಿತ ಮಂಡಳಿ, ಶಾಲಾ ಸಿಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ “ಬೆಂಗಳೂರು ಚಲೋ’ ನಡೆಸಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ )ಕರ್ನಾಟಕದ ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುಮಾರು 64 ಮಾಹಿತಿಗಳನ್ನು ಒದಗಿಸಬೇಕಾಗಿದ್ದು, ಇವುಗಳಿಗೆ ಭಾರೀ ಶುಲ್ಕ ಪಾವತಿಸಬೇಕಾಗಿದೆ. ಅದರಲ್ಲೂ ಅಗ್ನಿ ಸುರಕ್ಷೆ ಬಗ್ಗೆ ದೃಢೀಕರಣ, ಕಟ್ಟಡ ಸುರಕ್ಷೆ ದೃಢೀಕರಣ ಹಾಗೂ ಶಾಲಾ ಕಟ್ಟಡವಿರುವ ನಿವೇಶನವು ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನಾ ಆದೇಶ ಇವುಗಳು ಖಾಸಗಿಯವರಿಗೆ ತೀವ್ರ ಸಂಕಷ್ಟ ತಂದಿದೆ. ಅವುಗಳನ್ನು ಸಡಿಲಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರಕಾರ ತಿರಸ್ಕರಿಸಿದೆ ಎಂದು ಆರೋಪಿಸಿದರು.
ಯಾವುದೇ ಜಾಗದಲ್ಲಿ ಶಾಲೆಗೆ ಕಟ್ಟಡವಿದ್ದರೂ ತೆರಿಗೆ ವಿಧಿಸುವಂತಿಲ್ಲ. ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಕೋರ್ಟ್ ಆದೇಶವಿದೆ. ಆದರೂ ತೆರಿಗೆ ವಸೂಲಾತಿ ನಡೆಸಲಾಗುತ್ತಿದೆ. ಮನವಿ ಸಲ್ಲಿಸಿ ಮೇಲಧಿಕಾರಿಗಳು ಒಪ್ಪಿದರೂ ಕಾರ್ಯಗತವಾಗುವುದಿಲ್ಲ. ಅಲ್ಲದೆ, ತೆರಿಗೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ.ಕ., ಉಡುಪಿ ಘಟಕದ ಜಿಲ್ಲಾಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಮಾತನಾಡಿ, ಸರಕಾರಿ ಶಾಲೆಗಳಿಗೊಂದು ಖಾಸಗಿ ಶಾಲೆಗಳಿಗೊಂದು ನೀತಿಯನ್ನು ಇಲಾಖೆ ಅನುಸರಿಸುತ್ತಿರುವುದು ಸರಿಯಲ್ಲ. ಶಾಲಾ ಕಟ್ಟಡವಿರುವ ನಿವೇಶನದ ಭೂ ಪರಿವರ್ತನಾ ಆದೇಶದ ಬಗ್ಗೆ ವಿನಾಯಿತಿ ನೀಡಬೇಕು. ಅಲ್ಲದೆ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಿ ಆಯ್ದ ಮಕ್ಕಳನ್ನು ಟ್ಯೂಷನ್ ನೀಡುತ್ತಿರುವ ಟ್ಯುಟೋರಿಯಲ್ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
Mangalore Puranik says private school face renewal issues, warns of Bangalore chalo
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am