ಬ್ರೇಕಿಂಗ್ ನ್ಯೂಸ್
14-08-24 02:24 pm Mangalore Correspondent ಕರಾವಳಿ
ಉಳ್ಳಾಲ, ಆ.14: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿ ರಸ್ತೆಗೆಸೆಯಲ್ಪಟ್ಟಿದ್ದು, ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಸಾವನ್ನಪ್ಪಿದ ರಿಕ್ಷಾ ಚಾಲಕ. ಮಜೀದ್ ನಿನ್ನೆ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕ ಮಹಿಳೆಯರಿಬ್ಬರನ್ನ ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ಸಾಗುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿಗೆ ತಲುಪುತ್ತಿದ್ದಂತೆ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಚಾಲಕನಿಲ್ಲದ ರಿಕ್ಷಾವು ಮುಂದೆ ಚಲಿಸಿದ್ದು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ನಿತ್ಯಾನಂದ ಎಂಬವರ ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಆಟೋ ಕೊಂಚ ಮುಂದೆ ಚಲಿಸಿ ಹೆದ್ದಾರಿಗೆ ನುಗ್ಗುತ್ತಿದ್ದರೆ ಪ್ರಯಾಣಿಕ ಮಹಿಳೆಯರಿಬ್ಬರ ಪ್ರಾಣಕ್ಕೆ ಕಂಟಕ ಎದುರಾಗಲಿತ್ತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯನ್ನ ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರಂತೆ.
ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ದಿನ ನಿತ್ಯವೂ ಬೆಳಗ್ಗೆ ಮತ್ತು ಸಾಯಂಕಾಲದ ವೇಳೆ ತನ್ನ ರಿಕ್ಷಾದಲ್ಲಿ ಮಕ್ಕಳ ಸ್ಕೂಲ್ ಟ್ರಿಪ್ ಮಾಡಿ ಬದುಕು ಸಾಗಿಸುತ್ತಿದ್ದರು. ಅವರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Auto driver gets heart attack while driving at kotekar, dies on spot. Two passengers escape unhurt. The deceased has been identified as Abdul Majeed native of Ullal.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm