ಬ್ರೇಕಿಂಗ್ ನ್ಯೂಸ್
14-08-24 02:24 pm Mangalore Correspondent ಕರಾವಳಿ
ಉಳ್ಳಾಲ, ಆ.14: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿ ರಸ್ತೆಗೆಸೆಯಲ್ಪಟ್ಟಿದ್ದು, ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಸಾವನ್ನಪ್ಪಿದ ರಿಕ್ಷಾ ಚಾಲಕ. ಮಜೀದ್ ನಿನ್ನೆ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕ ಮಹಿಳೆಯರಿಬ್ಬರನ್ನ ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ಸಾಗುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿಗೆ ತಲುಪುತ್ತಿದ್ದಂತೆ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಚಾಲಕನಿಲ್ಲದ ರಿಕ್ಷಾವು ಮುಂದೆ ಚಲಿಸಿದ್ದು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ನಿತ್ಯಾನಂದ ಎಂಬವರ ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಆಟೋ ಕೊಂಚ ಮುಂದೆ ಚಲಿಸಿ ಹೆದ್ದಾರಿಗೆ ನುಗ್ಗುತ್ತಿದ್ದರೆ ಪ್ರಯಾಣಿಕ ಮಹಿಳೆಯರಿಬ್ಬರ ಪ್ರಾಣಕ್ಕೆ ಕಂಟಕ ಎದುರಾಗಲಿತ್ತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯನ್ನ ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರಂತೆ.
ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ದಿನ ನಿತ್ಯವೂ ಬೆಳಗ್ಗೆ ಮತ್ತು ಸಾಯಂಕಾಲದ ವೇಳೆ ತನ್ನ ರಿಕ್ಷಾದಲ್ಲಿ ಮಕ್ಕಳ ಸ್ಕೂಲ್ ಟ್ರಿಪ್ ಮಾಡಿ ಬದುಕು ಸಾಗಿಸುತ್ತಿದ್ದರು. ಅವರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Auto driver gets heart attack while driving at kotekar, dies on spot. Two passengers escape unhurt. The deceased has been identified as Abdul Majeed native of Ullal.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm