ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm