ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm