ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am