ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm