ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm