ಬ್ರೇಕಿಂಗ್ ನ್ಯೂಸ್
08-12-20 06:43 pm Mangalore Correspondent ಕರಾವಳಿ
ಬೆಂಗಳೂರು, ಡಿ.8: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಮುಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕಿಡುವ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಕೋಟ್ಯಾನ್, ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ, ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದವರು ಕೋಟಿ ಚೆನ್ನಯರು. ಅವಳಿ ವೀರರನ್ನು ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ದೇವರ ಸ್ಥಾನದಲ್ಲಿ ಪೂಜಿಸುತ್ತಾರೆ. ರಾಜ್ಯದ ಹೊರಗಿನಲ್ಲಿ 260ಕ್ಕೂ ಹೆಚ್ಚು ಗರಡಿಗಳನ್ನು ಸ್ಥಾಪನೆ ಮಾಡಿದ್ದರು. ಹೀಗಾಗಿ ಜಾತಿ, ಧರ್ಮದ ಭೇದ ಇಲ್ಲದೆ ಕೋಟಿ ಚೆನ್ನಯರು ಪೂಜೆಗೊಳ್ಳುತ್ತಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರುಷ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂಬ ಕರಾವಳಿ ಜನರ ಬಹುಕಾಲದ ಬೇಡಿಕೆಯನ್ನು ಸದನ ಮನ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಉಮಾನಾಥ ಕೋಟ್ಯಾನ್, ಜನಾಭಿಪ್ರಾಯಕ್ಕೆ ಸ್ಪಂದಿಸಿ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ ಎಂದು ಹೇಳಿದ್ದಾರೆ.
Mulky-Moodbidri MLA Umanath Kotian on Tuesday, December 8 urged the Karnataka Legislative Assembly speaker Vishweshwar Hegde Kageri to recommend the union government to name Mangaluru International Airport after Tulunadu Bravehearts Koti-Chennayya.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm