ಬ್ರೇಕಿಂಗ್ ನ್ಯೂಸ್
17-08-24 04:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕೊಲ್ಕೊತ್ತಾದಲ್ಲಿ ವೈದ್ಯ ಯುವತಿಯನ್ನು ಅತ್ಯಾಚಾರಗೈದು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ವೆನ್ಲಾಕ್ ಹಿಂಭಾಗದಲ್ಲಿರುವ ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯ ಬಳಿ ಸೇರಿದ ವೈದ್ಯರು ಬಳಿಕ ಹಂಪನಕಟ್ಟೆ, ಕ್ಲಾಕ್ ಟವರ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ ನಡಿಗೆಯಲ್ಲಿ ಸಾಗಿದರು. ವೈದ್ಯರು, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಇತರ ಸಿಬಂದಿ ಸೇರಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಸಾಥ್ ಕೊಟ್ಟರು.












ಪ್ರತಿಭಟನಾ ಜಾಥಾದ ನಡುವೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಕೂಡ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದ ಗೇಟ್ ಬಳಿ ಪೊಲೀಸರು ತಡೆ ಹಾಕಿ, ಹತ್ತು ಮಂದಿಗಷ್ಟೇ ಜಿಲ್ಲಾಧಿಕಾರಿ ಬಳಿಗೆ ಹೋಗಲು ಅವಕಾಶ ನೀಡುತ್ತೇವೆಂದು ಹೇಳಿದರು. ಈ ವೇಳೆ, ಶಾಸಕರು ಮತ್ತು ವೈದ್ಯಕೀಯ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಕೆಲಹೊತ್ತು ಮಾತುಕತೆ ನಡೆಯಿತು. ಶಾಸಕರು ನಾವೆಲ್ಲ ಒಳಗಡೆ ಬರುತ್ತೇವೆ ಎಂದಾಗ, ಡಿಸಿಪಿ ಸಿದ್ಧಾರ್ಥ ಗೋಯಲ್ ಅವಕಾಶ ನೀಡಲಿಲ್ಲ. ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಬಂದು ವೈದ್ಯರ ಸಂಘದ ಮನವಿಯನ್ನು ಸ್ವೀಕರಿಸಿದರು.
ಇದೇ ವೇಳೆ, ಮಾಧ್ಯಮಕ್ಕೆ ಮಾತನಾಡಿದ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷೆ ಡಾ.ಜೆಸ್ಸಿ ಮರಿಯಾ ಡಿಸೋಜ, ಭಾರತವನ್ನು ಭಾರತ ಮಾತೆಯೆಂದು ಪೂಜಿಸುತ್ತೇವೆ. ತಾಯಿಗೆ ಪವಿತ್ರ ಸ್ಥಾನ ಕೊಟ್ಟ ದೇಶದಲ್ಲಿ ಮಹಿಳೆಗೆ ರಕ್ಷಣೆ ಇಲ್ಲದಾಗಿರುವುದು ದೌರ್ಭಾಗ್ಯ. ಯಾರು ಈ ಅಮಾನುಷ ಕೃತ್ಯ ಮಾಡಿದ್ದಾರೋ ಅವರಿಗೆ ತ್ವರಿತ ಗತಿಯಲ್ಲಿ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದರು. ವೈದ್ಯರ ಸಂಘದ ಡಾ.ರಂಜನ್ ಕಾಮತ್, ಡಾ.ಅವಿನ್ ಆಳ್ವ. ಡಾ.ಮಹಾಬಲ ಶೆಟ್ಟಿ ಮತ್ತಿತರರಿದ್ದರು.
The Indian Medical Association (IMA) Mangaluru Chapter, in collaboration with various voluntary organizations, organized a 'Silent March' on Saturday, August 17, to demand justice and protest against the recent murder of a doctor on duty in Kolkata.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am