ಬ್ರೇಕಿಂಗ್ ನ್ಯೂಸ್
17-08-24 04:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕೊಲ್ಕೊತ್ತಾದಲ್ಲಿ ವೈದ್ಯ ಯುವತಿಯನ್ನು ಅತ್ಯಾಚಾರಗೈದು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ವೆನ್ಲಾಕ್ ಹಿಂಭಾಗದಲ್ಲಿರುವ ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯ ಬಳಿ ಸೇರಿದ ವೈದ್ಯರು ಬಳಿಕ ಹಂಪನಕಟ್ಟೆ, ಕ್ಲಾಕ್ ಟವರ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ ನಡಿಗೆಯಲ್ಲಿ ಸಾಗಿದರು. ವೈದ್ಯರು, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಇತರ ಸಿಬಂದಿ ಸೇರಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಸಾಥ್ ಕೊಟ್ಟರು.












ಪ್ರತಿಭಟನಾ ಜಾಥಾದ ನಡುವೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಕೂಡ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದ ಗೇಟ್ ಬಳಿ ಪೊಲೀಸರು ತಡೆ ಹಾಕಿ, ಹತ್ತು ಮಂದಿಗಷ್ಟೇ ಜಿಲ್ಲಾಧಿಕಾರಿ ಬಳಿಗೆ ಹೋಗಲು ಅವಕಾಶ ನೀಡುತ್ತೇವೆಂದು ಹೇಳಿದರು. ಈ ವೇಳೆ, ಶಾಸಕರು ಮತ್ತು ವೈದ್ಯಕೀಯ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಕೆಲಹೊತ್ತು ಮಾತುಕತೆ ನಡೆಯಿತು. ಶಾಸಕರು ನಾವೆಲ್ಲ ಒಳಗಡೆ ಬರುತ್ತೇವೆ ಎಂದಾಗ, ಡಿಸಿಪಿ ಸಿದ್ಧಾರ್ಥ ಗೋಯಲ್ ಅವಕಾಶ ನೀಡಲಿಲ್ಲ. ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಬಂದು ವೈದ್ಯರ ಸಂಘದ ಮನವಿಯನ್ನು ಸ್ವೀಕರಿಸಿದರು.
ಇದೇ ವೇಳೆ, ಮಾಧ್ಯಮಕ್ಕೆ ಮಾತನಾಡಿದ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷೆ ಡಾ.ಜೆಸ್ಸಿ ಮರಿಯಾ ಡಿಸೋಜ, ಭಾರತವನ್ನು ಭಾರತ ಮಾತೆಯೆಂದು ಪೂಜಿಸುತ್ತೇವೆ. ತಾಯಿಗೆ ಪವಿತ್ರ ಸ್ಥಾನ ಕೊಟ್ಟ ದೇಶದಲ್ಲಿ ಮಹಿಳೆಗೆ ರಕ್ಷಣೆ ಇಲ್ಲದಾಗಿರುವುದು ದೌರ್ಭಾಗ್ಯ. ಯಾರು ಈ ಅಮಾನುಷ ಕೃತ್ಯ ಮಾಡಿದ್ದಾರೋ ಅವರಿಗೆ ತ್ವರಿತ ಗತಿಯಲ್ಲಿ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದರು. ವೈದ್ಯರ ಸಂಘದ ಡಾ.ರಂಜನ್ ಕಾಮತ್, ಡಾ.ಅವಿನ್ ಆಳ್ವ. ಡಾ.ಮಹಾಬಲ ಶೆಟ್ಟಿ ಮತ್ತಿತರರಿದ್ದರು.
The Indian Medical Association (IMA) Mangaluru Chapter, in collaboration with various voluntary organizations, organized a 'Silent March' on Saturday, August 17, to demand justice and protest against the recent murder of a doctor on duty in Kolkata.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm