ಬ್ರೇಕಿಂಗ್ ನ್ಯೂಸ್
17-08-24 10:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆ ಹಾಗೂ ಸಂವಿಧಾನದ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ, ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.
"ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಶನಿವಾರ ನೀಡಿದ ಅನುಮತಿಯಿಂದ ಜನ ವಿರೋಧಿ ಭ್ರಷ್ಟ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸತ್ಯಕ್ಕೆ ಜಯ ಸಿಗಲೇಬೇಕು ಎನ್ನುವುದು ಅರ್ಥವಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಚಾರದ ಪ್ರಕರಣವಾಗಿರದೇ, ದುರ್ಬಲ, ಬಡ ವರ್ಗದ ಜನರಿಗೆ ಎಸಗಿರುವ ವಂಚನೆಯಾಗಿದೆ.
"ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ, ಸಣ್ಣದೊಂದು ಕಪ್ಪು ಚುಕ್ಕಿ ಇಲ್ಲದಂತೆ ರಾಜಕೀಯ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎನ್ನುವ ರೀತಿ ಸಾರ್ವಜನಿಕವಾಗಿ ಸಾರುತ್ತಾ ಬಂದಿರುವ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ರಾಜ್ಯದ ಜನತೆಗೆ ಮೋಸ ಮಾಡಿದ್ದಾರೆ"
"ಒಂದೆಡೆ ಕಾಂಗ್ರೆಸ್ ರಾಜ್ಯದ ಬೊಕ್ಕಸವನ್ನೇ ಖಾಲಿ ಮಾಡಿದ್ದು, ಮತ್ತೊಂದೆಡೆ ಬಡವರ ಹಕ್ಕುಗಳನ್ನು ನಿರ್ಲಕ್ಷಿಸಿ ತಮ್ಮ ಖಜಾನೆ ತುಂಬಿಸಿಕೊಂಡಿದೆ. ಇದು ಹಗಲು ದರೋಡೆಯಾಗಿದ್ದು, ಇನ್ನು ಮುಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯ ಪ್ರಭಾವ ಬೀರಿ ನುಣುಚಿಕೊಳ್ಳಲು ಸಾಧ್ಯವಿಲ್ಲ."
"ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ ಅವರು ಈ ಕೂಡಲೇ ಸಿಎಂ ಸ್ಥಾನ ತ್ಯಜಿಸುವ ಸಮಯ ಬಂದಿದ್ದು, ತಮ್ಮ ವಿರುದ್ದ ಕೇಳಿಬಂದಿರುವ ಎಲ್ಲಾ ಆರೋಪಗಳಿಗೆ ಜನತೆ ಮುಂದೆ ಉತ್ತರಿಸಲಿ" ಎಂದು ಸಂಸದ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Mp Brijesh Chowta slams CM Siddaramaiah, says he must resign in Muda case. Karnataka Chief Minister Siddaramaiah faces a big challenge as the Governor has sanctioned his prosecution over alleged irregularities in the site allotment by the Mysuru Urban Development Authority (MUDA).
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm