ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm