ಬ್ರೇಕಿಂಗ್ ನ್ಯೂಸ್
19-08-24 12:25 pm Udupi Correspondent ಕರಾವಳಿ
Photo credits : Udayavani
ಉಡುಪಿ, ಆಗಸ್ಟ್.18: ಶಿರ್ವ ಶ್ರೀ ಸಿದ್ಧಿವಿನಾಯಕ ದೇಗುಲದ ಸಂಸ್ಥಾಪಕ ಗ್ಯಾಬ್ರಿಯಲ್ ಫೇಬಿಯನ್ ನಜರೆತ್ (80) ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಅವಿವಾಹಿತರಾಗಿದ್ದರು.
ಸಿದ್ಧಿವಿನಾಯಕನ ಪರಮ ಭಕ್ತರಾಗಿದ್ದ ಅವರು ತನ್ನ ಧರ್ಮದ ಜತೆಗೆ ಹಿಂದೂ ಧರ್ಮದ ಬಗ್ಗೆ ಪ್ರೀತಿ, ಕಾಳಜಿ ಹೊಂದಿದ್ದರು. ಮುಂಬೈಯಲ್ಲಿದ್ದ ಉದ್ದಿಮೆಯನ್ನು ಮಾರಾಟ ಮಾಡಿ ಊರಿಗೆ ಬಂದು ನೆಲೆಸಿದ ಬಳಿಕ ಸುಮಾರು 15 ಸೆಂಟ್ಸ್ ಜಾಗದಲ್ಲಿ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಮಟ್ಟಾರು-ಅಟ್ಟಿಂಜ ಕ್ರಾಸ್ ಬಳಿ 2 ಕೋ.ರೂ ವೆಚ್ಚದಲ್ಲಿ ತನ್ನ ಹೆತ್ತವರ ನೆನಪಿಗಾಗಿ ಶ್ರೀ ಸಿದ್ದಿವಿನಾಯಕನ ದೇಗುಲ ನಿರ್ಮಿಸಿ ಹಿಂದು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದರು.
ಪಲಿಮಾರು ಮಠಾಧೀಶರ ಮಾರ್ಗದರ್ಶನದಲ್ಲಿ 2021ರ ಜು.15ರಂದು ಶ್ರೀ ಸಿದ್ಧಿ ವಿನಾಯಕ ದೇಗುಲ ಲೋಕಾರ್ಪಣೆಗೊಂಡಿತ್ತು. ದೇಗುಲದ ತೃತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಇದೇ ಜುಲೈ 15 ರಂದು ನಡೆದಿದ್ದು ಅದೇ ಸಂದರ್ಭದಲ್ಲಿ ನಜ್ರತ್ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಹಿಂದೆ ಮುಂಬೈಯ ಪ್ರಭಾದೇವಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬಳಿ ವಾಸ್ತವ್ಯವಿದ್ದ ಅವರು ಶ್ರೀ ಸಿದ್ಧಿವಿನಾಯಕನನ್ನ ನೆನೆದು ಸ್ವಪ್ರಯತ್ನದಿಂದ ದೇವಸ್ಥಾನದ ಬಳಿಯೇ ಪ್ಲಾಸ್ಟಿಕ್ ಮತ್ತು ಮೆಟಲ್ ಡೈ ಮೇಕಿಂಗ್ ವರ್ಕ್ ಶಾಪ್ ಸ್ಥಾಪಿಸಿ ಯಶಸ್ಸು ಗಳಿಸಿದ್ದರು. 40 ವರ್ಷಗಳಲ್ಲಿ ಮೂರು ಕಡೆ ಉದ್ದಿಮೆ ಸ್ಥಾಪಿಸಿದ್ದರು. ಕೊನೆಗೆ, ಮುಂಬೈಯ ಉದ್ದಿಮೆಯನ್ನು ಮಾರಾಟ ಮಾಡಿ ಬಂದ ಹಣವನ್ನು ಅಲ್ಲಿನ ಸಿಬಂದಿ ವರ್ಗಕ್ಕೆ ದಾನವಾಗಿ ನೀಡಿದ್ದರು.
ಊರಿಗೆ ಬಂದು ಜಾತಿ ಮತ ಧರ್ಮದ ಭೇದವಿಲ್ಲದೆ ಸುಮಾರು 60 ಮಂದಿಯ ಮದುವೆಗೆ ಧನಸಹಾಯ ಮಾಡಿದ್ದರು. ಅಲ್ಲದೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ಸರ್ವ ಧರ್ಮೀಯ ಬಡವರ ಸೇವೆಗಾಗಿ ನಿವೇಶನವನ್ನೂ ಕೊಡುಗೆಯಾಗಿ ನೀಡಿದ್ದರು.
ಮೃತರ ಅಂತ್ಯಕ್ರಿಯೆ ಆ.19 ರಂದು ಮಧ್ಯಾಹ್ನ 3 ಗಂಟೆಗೆ ಶಿರ್ವ ಆರೋಗ್ಯ ಮಾತೆಯ ದೇಗುಲದಲ್ಲಿ ನಡೆಯಲಿದೆ. ಮೃತರ ಅಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಬೆಳಗ್ಗೆ 11ರಿಂದ ಸಿದ್ಧಿವಿನಾಯಕ ದೇಗುಲದ ಬಳಿಯ ಅವರ ನಿವಾಸದಲ್ಲಿ ಅವಕಾಶ ಕಲ್ಪಿಸಲಾಗಿದೆ.
Gabriel Fabian Nazareth (80), the founder of Shirva Shri Siddhivinayaka temple, passed away on Sunday, August 18 at a private hospital in Udupi. He was unmarried. The funeral rites will be held on August 19 at 3:00 PM at Shirva Health Mother Church. The public can pay their last respects from 11 AM at his residence near the Shri Siddhivinayak Temple.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm