ಬ್ರೇಕಿಂಗ್ ನ್ಯೂಸ್
19-08-24 06:40 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ಸಿಎಂ ಸಿದ್ದರಾಮಯ್ಯ ಮೇಲೆ ಗುರುತರ ಆರೋಪ ಮತ್ತು ಅದಕ್ಕೆ ತಕ್ಕಷ್ಟು ಸಾಕ್ಷ್ಯ ಇರುವುದರಿಂದಲೇ ರಾಜ್ಯಪಾಲರು ಪ್ರಾಸಿಕ್ಯುಶನ್ ಅನುಮತಿ ನೀಡಿದ್ದಾರೆ. ಹೀಗಿರುವಾಗ ಆರೋಪಿತ ವ್ಯಕ್ತಿಯೇ ಸಾಂವಿಧಾನಿಕ ಹುದ್ದೆಯಲ್ಲಿದ್ದು ವಿಚಾರಣೆ ಎದುರಿಸುವುದು ಸರಿಯಲ್ಲ. ತಾನೊಬ್ಬ ಕಳಂಕರಹಿತ, ಭ್ರಷ್ಟಾಚಾರ ರಹಿತ ವ್ಯಕ್ತಿಯೆಂದು ಹೇಳಿಕೊಂಡು ಬಂದ ಸಿದ್ದರಾಮಯ್ಯ ಈಗ ರಾಜಿನಾಮೆ ಕೊಟ್ಟು ಪ್ರಕರಣ ಎದುರಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವಿಚಾರಣೆಯನ್ನು ಲೋಕಾಯುಕ್ತ ಅಥವಾ ಎಸ್ಐಟಿ ಅಧಿಕಾರಿಗಳೇ ನಡೆಸಬೇಕು. ರಾಜ್ಯ ಸರ್ಕಾರದ ಮುಖ್ಯಸ್ಥ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಸರ್ಕಾರದ ಅಧೀನ ಸಂಸ್ಥೆಯ ಅಧಿಕಾರಿಗಳು ವಿಚಾರಣೆ ನಡೆಸುವುದು ಹೇಗೆ. ಆರೋಪದ ಬಗ್ಗೆ ಸರಿಯಾದ ವಿಚಾರಣೆ ನಡೆಸುವುದು ಇದರಿಂದ ಸಾಧ್ಯವಿಲ್ಲ. ಹೀಗಾಗಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿಯೇ ವಿಚಾರಣೆ ಎದುರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುವ ನೆಪದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಬಾಂಗ್ಲಾ ರೀತಿಯ ಹಿಂಸಾಚಾರ ನಡೆಸುವ ಬಗ್ಗೆ ಮಾತಾಡಿದ್ದಾರೆ. ಆಮೂಲಕ ರಾಜ್ಯದಲ್ಲಿ ದಂಗೆ ಎಬ್ಬಿಸಲು ಪ್ರಚೋದನೆ ನೀಡಿದ್ದಾರೆ. ತಮ್ಮ ನಾಯಕ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡಿದ್ದಿರಬಹುದು. ಬಿಜೆಪಿ ಈ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತಿದ್ದು, ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕೆಂದು ಒತ್ತಾಯಿಸುತ್ತೇನೆ ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ಆಪ್ತರಾದ ಐವಾನ್ ಡಿಸೋಜ ರಾಜ್ಯದಲ್ಲಿ ಬಾಂಗ್ಲಾ ರೀತಿಯ ಹಿಂಸಾಚಾರಕ್ಕೆ ಕರೆ ಕೊಟ್ಟಿದ್ದಾರೆ. ಆದರೆ ರಾಜ್ಯದ ಪೊಲೀಸರು ಸಶಕ್ತರಿದ್ದಾರೆ. ಇದನ್ನೆಲ್ಲ ಹತ್ತಿಕ್ಕಲು ಶಕ್ತರಿದ್ದಾರೆ. ನಾವೇನೂ ಇದಕ್ಕೆಲ್ಲ ಭಯ ಪಡಲ್ಲ. ನಮ್ಮ ವಿರುದ್ಧ ಸುಮೊಟೋ ಕೇಸು ದಾಖಲಿಸಿದ ಮಂಗಳೂರು ಪೊಲೀಸರು ಈಗ ಐವಾನ್ ಡಿಸೋಜ ವಿರುದ್ಧವೂ ಕೇಸು ದಾಖಲಿಸಬೇಕು ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಕಿಶೋರ್ ಬೊಟ್ಯಾಡಿ, ಯತೀಶ್ ಆರ್ವಾರ್, ನಿತಿನ್ ಕುಮಾರ್, ಸಂಜಯ ಪ್ರಭು ಮತ್ತಿತರರಿದ್ದರು.
Mangalore MP Brijesh Chowta slams Ivan dsouza for his remarks on governor, demands Sumoto case.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm