ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm