ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 01:29 pm
HK News Desk
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm