ಬ್ರೇಕಿಂಗ್ ನ್ಯೂಸ್
20-08-24 06:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಪಾರದರ್ಶಕ ತನಿಖೆಗೆ ಅನುವಾಗುವಂತೆ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದರು.
ಈಗಾಗಲೇ ರಾಷ್ಟ್ರಮಟ್ಟದಲ್ಲಿ ಪ್ರಕರಣ ಸದ್ದು ಮಾಡಿದ್ದು ಇಡೀ ದೇಶವೇ ಕರ್ನಾಟಕವನ್ನು ಅನುಮಾನದ ಕಣ್ಣುಗಳಿಂದ ನೋಡುತ್ತಿದೆ. ಈ ಸಂದರ್ಭದಲ್ಲಿ “ನಾನು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ರಾಜ್ಯಪಾಲರೇ ರಾಜೀನಾಮೆ ನೀಡಲಿ” ಎಂದು ಮೊಂಡುತನ ಪ್ರದರ್ಶಿಸಿದ ಮುಖ್ಯಮಂತ್ರಿಗಳಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ಸಿನ ಪುಂಡಪೋಕರಿಗಳು ಬಸ್ಸಿಗೆ ಕಲ್ಲು ತೂರಿ ಸಾರ್ವಜನಿಕರಲ್ಲಿ ಭಯಭೀತ ವಾತಾವರಣ ಸೃಷ್ಟಿಸುವ ಮೂಲಕ ಬೆಂಬಲ ನೀಡಿದ್ದಾರೆ. ಕಲ್ಲೆಸೆದ ಕಾಂಗ್ರೆಸ್ಸಿನ ಆರೋಪಿಗಳಿಗೆ ಠಾಣೆಯಲ್ಲಿ ಜಾಮೀನು ನೀಡಿ ಗೌರವದಿಂದ ಬಿಟ್ಟು ಕಳುಹಿಸುವ ಮಟ್ಟಿಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುವುದು ಜಿಲ್ಲೆಯ ಜನತೆಯ ದೌರ್ಭಾಗ್ಯ. ಈ ಬಗ್ಗೆ ಬಸ್ ಮಾಲಕರ, ಚಾಲಕರು ಕೂಡ ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಾಗಲೀ, ಕಾಂಗ್ರೆಸ್ಸಿನವರಾಗಲೀ ಯಾರೂ ಸಂವಿಧಾನಕ್ಕೆ, ಕಾನೂನಿಗೆ ಅತೀತರಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದರು.

ಬಾಂಗ್ಲಾದಲ್ಲಿ ನಡೆದ ದಂಗೆಯಂತೆ ಮಂಗಳೂರಿನಲ್ಲು ನಡೆಸಿ ರಾಜ್ಯಪಾಲರ ಕಚೇರಿಗೆ ನುಗ್ಗಿ ಅವರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜ ಅವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವುದನ್ನು ಬಿಟ್ಟು ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಪೊಲೀಸರು ಸಿದ್ದರಾಮಯ್ಯ ಬಗ್ಗೆ ಯಾರೋ ಸಾಮಾಜಿಕ ಜಾಲತಾಣದಲ್ಲಿ ಗೀಚಿದ್ದಕ್ಕೆ ಹೇಗೆ ಸುಮೊಟೊ ಕೇಸು ದಾಖಲಿಸಿಕೊಂಡರು? ವಾರ್ಡ್ ಮಟ್ಟದಲ್ಲಿಯೂ ಚುನಾವಣೆಗೆ ನಿಂತು ಗೆಲ್ಲಲಾಗದ ವ್ಯಕ್ತಿಗಳು ಸಿದ್ದರಾಮಯ್ಯನವರಿಗೆ ಬಕೆಟ್ ಹಿಡಿದು ಭಿಕ್ಷೆ ರೂಪದಲ್ಲಿ ಸೀಟು ಗಿಟ್ಟಿಸಿ ಅದರ ಋಣ ಸಂದಾಯಕ್ಕಾಗಿ ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಅಕ್ಷಮ್ಯ. ಕೂಡಲೇ ಭ್ರಷ್ಟಾಚಾರದ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ಇವರ ಮೇಲೆ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.
Plan to spoil the name of Mangalore city is done by Congress state government slams MLA Vedavyas kamath.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm