ಬ್ರೇಕಿಂಗ್ ನ್ಯೂಸ್
20-08-24 11:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 20: ಮೊಬೈಲ್ ಬಳಕೆಯ ಬಗ್ಗೆ ಹೆತ್ತವರು ಗದರಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಮಕ್ಕಳು ಸಾವಿಗೆ ಶರಣಾದ ಪ್ರತ್ಯೇಕ ಘಟನೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಜಾರ್ಖಂಡ್ ಮೂಲದ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ.
ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿಯ ನಿವಾಸಿ ಪ್ರಥಮೇಶ್ (17) ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಚಾಳಿ ಕಡಿಮೆ ಮಾಡಲು ಮನೆಯವರು ಮೊಬೈಲ್ ತೆಗೆದಿಟ್ಟಿದ್ದರು. ಕಾಲೇಜಿಗೆಂದು ತೆರಳಿದ್ದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಹುಡುಗ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿ ರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವ ಮಾಹಿತಿ ಲಭಿಸಿತ್ತು. ಪೊಲೀಸರು ಹುಡುಕಾಡಿ ಬಾವಿಯಿಂದ ವಿದ್ಯಾರ್ಥಿಯ ಮೃತದೇಹ ಹೊರ ತೆಗೆದಿದ್ದಾರೆ.
ಮೊಬೈಲ್ ಗೀಳು, ತಾಯಿಗೆ ಗೋಳು
ಮೊಬೈಲ್ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿ ಬಗ್ಗೆ ಮುನಿಸಿಕೊಂಡ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದಲ್ಲಿ ನಡೆದಿದೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್ ಮೃತಳು. ಜಾರ್ಖಂಡ್ನ ಲಾತೆಹಾರ್ ಜಿಲ್ಲೆ ನಿವಾಸಿ ಸರ್ಜು ಬುಯ್ಯಾನ್ ಎಂಬವರು ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಭಾನುವಾರ ಸಂಜೆ ಮಗಳು ಮೊಬೈಲ್ ವಿಚಾರದಲ್ಲಿ ಸಿಟ್ಟಿಗೆದ್ದು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
Mangalore Udupi Mobile addict, two suicide cases registered over parents shouting over mobile use.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 08:46 pm
Mangalore Correspondent
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
Mangalore Missing, Deralakatte: ದೇರಳಕಟ್ಟೆ ಮಸೀ...
20-09-25 06:39 pm
Mangalore, Heart Attack: ಪ್ರತ್ಯೇಕ ಪ್ರಕರಣ ; ಮೂ...
20-09-25 02:31 pm
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm