ಬ್ರೇಕಿಂಗ್ ನ್ಯೂಸ್
20-08-24 11:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 20: ಮೊಬೈಲ್ ಬಳಕೆಯ ಬಗ್ಗೆ ಹೆತ್ತವರು ಗದರಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಮಕ್ಕಳು ಸಾವಿಗೆ ಶರಣಾದ ಪ್ರತ್ಯೇಕ ಘಟನೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಜಾರ್ಖಂಡ್ ಮೂಲದ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ.
ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿಯ ನಿವಾಸಿ ಪ್ರಥಮೇಶ್ (17) ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಚಾಳಿ ಕಡಿಮೆ ಮಾಡಲು ಮನೆಯವರು ಮೊಬೈಲ್ ತೆಗೆದಿಟ್ಟಿದ್ದರು. ಕಾಲೇಜಿಗೆಂದು ತೆರಳಿದ್ದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಹುಡುಗ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿ ರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವ ಮಾಹಿತಿ ಲಭಿಸಿತ್ತು. ಪೊಲೀಸರು ಹುಡುಕಾಡಿ ಬಾವಿಯಿಂದ ವಿದ್ಯಾರ್ಥಿಯ ಮೃತದೇಹ ಹೊರ ತೆಗೆದಿದ್ದಾರೆ.
ಮೊಬೈಲ್ ಗೀಳು, ತಾಯಿಗೆ ಗೋಳು
ಮೊಬೈಲ್ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿ ಬಗ್ಗೆ ಮುನಿಸಿಕೊಂಡ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದಲ್ಲಿ ನಡೆದಿದೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್ ಮೃತಳು. ಜಾರ್ಖಂಡ್ನ ಲಾತೆಹಾರ್ ಜಿಲ್ಲೆ ನಿವಾಸಿ ಸರ್ಜು ಬುಯ್ಯಾನ್ ಎಂಬವರು ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಭಾನುವಾರ ಸಂಜೆ ಮಗಳು ಮೊಬೈಲ್ ವಿಚಾರದಲ್ಲಿ ಸಿಟ್ಟಿಗೆದ್ದು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
Mangalore Udupi Mobile addict, two suicide cases registered over parents shouting over mobile use.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm