ಬ್ರೇಕಿಂಗ್ ನ್ಯೂಸ್
21-08-24 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮೂರ್ಛೆಯಿಂದ ಎದ್ದು ಕೂತಿದೆ. ಐವನ್ ರನ್ನು ಹೀಯಾಳಿಸುವ ನೆಪದಲ್ಲಿ ನಿದ್ದೆಯಿಂದ ಎದ್ದು ಕುಳಿತಿದ್ದು ಖುಷಿ ಕೊಟ್ಟಿದೆ. ಆದರೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಸಂದರ್ಭದಲ್ಲಿ ನಿಮ್ಮ ಮೋರ್ಚಾ ಎಲ್ಲಿತ್ತು. ವ್ಯಾಪಾರ ನಿಷೇಧ ಮಾಡಿದಾಗ, ಕೊಲೆಗಳಾದಾಗ ನೀವು ಎಲ್ಲಿದ್ದಿರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ತಿರುಗೇಟು ನೀಡಿದ್ದಾರೆ.
ಬಾಂಗ್ಲಾ ಪರ ಹೇಳಿಕೆ ನೀಡಿದ ಐವನ್ ಡಿಸೋಜ ಹಿಂಬಾಗಿಲಲ್ಲಿ ಬಂದವರು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕರು ಹೇಳಿರುವ ಮಾತಿಗೆ ತಿರುಗೇಟು ನೀಡಲು ಸುದ್ದಿಗೋಷ್ಟಿ ನಡೆಸಿದ ಶಾಹುಲ್ ಹಮೀದ್, ಎರಡು ವರ್ಷ ಹಿಂದೆ ಫಾಜಿಲ್ ಎಂಬ ಯುವಕ ರಸ್ತೆ ಬದಿ ನಿಂತಿದ್ದಾಗ ಕೊಂದು ಹಾಕಿದ್ರಲ್ಲಾ, ಆಗ ನೀವು ಎಲ್ಲಿದ್ದಿರಿ. ಸಿಟಿ ರವಿ, ಶೋಭಾ ಕರಂದ್ಲಾಜೆ ಮಸೀದಿ ಬಗ್ಗೆ ಹೇಳಿಕೆ ಕೊಟ್ಟಾಗ ನೀವು ಎಲ್ಲಿದ್ದಿರಿ. ಬೆಳ್ತಂಗಡಿ ಶಾಸಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಹಿಂದುಗಳು ಹೋಗಬಾರದು ಎಂದಾಗ ನೀವು ಮಾತಾಡಿಲ್ಲ ಯಾಕೆ. ಇಡೀ ರಾಜ್ಯದಲ್ಲಿ ಒಂದು ಸೀಟು ಪಡೆಯಲು ಆಗದ ನಿಮಗೆ ಮಾನ ಮರ್ಯಾದೆ ಇದೆಯಾ.. ಎಂಎಲ್ಸಿ ಬಿಡಿ, ಒಂದು ಮೇಯರ್, ಜಿಪಂ ಸ್ಥಾನ ತೆಗೆಸುವುದಕ್ಕಾದರೂ ಆಗಿದೆಯಾ.. ಯಾಕೆ ನೀವು ಬಕೆಟ್ ಹಿಡಿಯುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.
ಐವಾನ್ ಡಿಸೋಜ ಎರಡನೇ ಬಾರಿ ಪರಿಷತ್ ಸದಸ್ಯರಾಗಿದ್ದಾರೆ. ನಿಮ್ಮ ಪ್ರತಾಪಸಿಂಹ ನಾಯಕ್, ಸಿಟಿ ರವಿ ಸೋತು ಸುಣ್ಣವಾದ ಬಳಿಕ ಹಿಂಬಾಗಿಲಲ್ಲಿ ಹೋಗಿದ್ದಲ್ವಾ. ನಿಮಗೆ ಹಿಂಬಾಗಿಲು ಬಿಡಿ ಶೌಚಾಲಯದ ಬಾಗಿಲೂ ಸಿಗಲ್ಲ. ಐವಾನ್ ಡಿಸೋಜ ಶ್ರಮಿಕ ವರ್ಗದ ನಾಯಕ. ಗ್ರಾಪಂ ಸ್ತರದಿಂದ ಮೇಲೆ ಬಂದವರು. ಎರಡು ಬಾರಿ ಅಸೆಂಬ್ಲಿಗೆ ಸ್ಪರ್ಧಿಸಿದ್ದಾರೆ. ಹೀಯಾಳಿಸುವ ಬದಲು ಮೋರ್ಚಾ ಬರ್ಖಾಸ್ತು ಮಾಡಿ ಹೊರಬನ್ನಿ ಎಂದರು. ಬಾಂಗ್ಲಾದಲ್ಲಿ ಸರ್ವಾಧಿಕಾರ, ಭ್ರಷ್ಟಾಚಾರ ಮೇಳೈಸಿತ್ತು. ಅಧಿಕಾರ ದುರುಪಯೋಗ ತಾಳಲಾರದೆ ಜನರು ದಂಗೆ ಎದ್ದಿದ್ದಾರೆ. ಅದೇ ರೀತಿ ನಮ್ಮಲ್ಲೂ ಆದರೆ ಜನರು ದಂಗೆ ಏಳಬಹುದು ಅಂತ ಐವಾನ್ ಡಿಸೋಜ ಹೇಳಿದ್ದಾರೆ ಎಂದಷ್ಟೇ ಪ್ರಶ್ನಿಸಿದ್ದಾರೆ. ಆಲ್ವಿನ್ ಪ್ರಕಾಶ್, ಇಬ್ರಾಹಿಂ ಕೋಡಿಜಾಲ್, ಸಬಿತಾ ಮಿಸ್ಕಿತ್, ಫಯಾಜ್, ನಜೀರ್ ಬಜಾಲ್, ಶಬೀರ್ ಸಿದ್ದಕಟ್ಟೆ ಮತ್ತಿತರರಿದ್ದರು.
Ivan dsouza remarks, congress Shahul Ahmeed slams BJP Morcha in Mangalore
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm