ಬ್ರೇಕಿಂಗ್ ನ್ಯೂಸ್
22-08-24 04:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್. 22: ಇದೊಂದು ಸರ್ಕಾರ ಮತ್ತು ಪೊಲೀಸರ ಪ್ರಾಯೋಜಿತ ದಂಗೆ. ಎರಡೂ ವ್ಯವಸ್ಥೆ ಒಟ್ಟು ಸೇರಿ ಕಲ್ಲು ಹೊಡೆಯೋದು, ಬೆಂಕಿ ಹಚ್ಚೋದು ಮಾಡಿದ್ದಾರೆ. ಐವಾನ್ ಡಿಸೋಜ ಒಬ್ಬ ಮೆಂಟಲ್ ಗಿರಾಕಿ, ಬಾಯಿಗೆ ಬಂದ ಹಾಗೆ ಮಾತನಾಡಿದ್ದಾನೆ. ಆದರೆ ಪೊಲೀಸರು ಯಾರದ್ದೇ ಚೇಲಾಗಳಾಗಿ ವರ್ತಿಸಬಾರದು. ಬಾಂಗ್ಲಾ ರೀತಿ ರಾಜಭವನಕ್ಕೆ ನುಗ್ಗುತ್ತೇವೆ ಎಂದವನ ಮೇಲೆ ಕೇಸು ಹಾಕುವ ಎದೆಗಾರಿಕೆ ತೋರಿಸಬೇಕು ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅಬ್ಬರಿಸಿದ್ದಾರೆ.
ಬಾಂಗ್ಲಾ ಪರ ಹೇಳಿಕೆ ನೀಡಿದ ಐವಾನ್ ಡಿಸೋಜ ವಿರುದ್ಧ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭರತ್ ಶೆಟ್ಟಿ ಮಾತನಾಡಿದರು. ಐವಾನ್ ಡಿಸೋಜ ತನ್ನ ಮನೆಯ ಮೇಲೆ ಕಲ್ಲು ತೂರಾಟವನ್ನ ಇವನ ಹುಡುಗರಿಂದಲೇ ಮಾಡಿಸಿರಬಹುದು. ಇದರಲ್ಲೂ ಹೀರೋ ಆಗಲು ನೋಡುತ್ತಿದ್ದಾನೆ. ಹೆಲ್ಮೆಟ್ ಹಾಕಿದ ಇಬ್ಬರು ಕಲ್ಲು ತೂರಾಟ ನಡೆಸಿದ್ದಾರಂತೆ. ಆ ಹೆಲ್ಮೆಟ್ ಹಾಕಿದ ಇಬ್ಬರು ನಾನು ಹಾಗೂ ವೇದವ್ಯಾಸ್ ಕಾಮತ್ ಎಂದು ಕೇಸ್ ಹಾಕಿದರೂ ಹಾಕಬಹುದು. ಈಗಾಗಲೇ ಸಾಕಷ್ಟು ಕೇಸ್ ಗಳನ್ನು ಹಾಕಿದ್ದಾರೆ, ಇನ್ನು ರೌಡಿಶೀಟ್ ತೆರೆಯಬಹುದೇನೋ ಗೊತ್ತಿಲ್ಲ. ಐವಾನ್ ರಾಜ್ಯಪಾಲರ ಮನೆಗೆ ನುಗ್ಗಿ ಹೊಡಿಯುತ್ತೇವೆ, ಓಡಿಸುತ್ತೇವೆ ಎಂದು ಹೇಳಿದ್ರು. ಅವರ ಮೇಲೆ ಕೇಸ್ ಹಾಕಲು ಪೊಲೀಸರು ಹಿಂದೆ ಮುಂದೆ ನೋಡುತ್ತಾರೆ. ಸರಕಾರ ಇದೆ ಎಂಬ ಕಾರಣಕ್ಕೆ ಪೋಲೀಸರು ಅವರ ಪರವಾಗಿ ನಿಲ್ಲಬೇಡಿ. ನಿಮ್ಮ ಆತ್ಮಸಾಕ್ಷಿಯಾಗಿ ಸರಿಯಾಗಿ ಕೆಲಸ ಮಾಡಿ. ನಮಗೂ ಕಲ್ಲು ಹೊಡೆಯೋದಕ್ಕೆ 5 ನಿಮಿಷ ಸಾಕು. ಟಯರ್ ಹಚ್ಚೋದಕ್ಕೆ 5 ನಿಮಿಷ ಸಾಕು. ಕಲ್ಲು ಹೊಡೆಯಲು ನಮ್ಮ ಯುವಮೋರ್ಚಾ ಕಾರ್ಯಕರ್ತರು ರೆಡಿ ಇದ್ದಾರೆ. ಆ ರೀತಿಯ ಅರಾಜಕತೆಯ ಪರಿಸ್ಥಿತಿ ತರುವ ಅವಶ್ಯಕತೆ ನಮಗಿಲ್ಲ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಒಬ್ಬ ದಲಿತ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸ್ತೀವಿ ಅಂತ ಬೆದರಿಕೆ ಹಾಕ್ತಿದಾರೆ. ಕಾಂಗ್ರೆಸ್ ನ ಒಬ್ಬ ಸಚಿವ ರಾಜ್ಯಪಾಲರ ಬಗ್ಗೆ ಏಕವಚನದಲ್ಲಿ ಮಾತನಾಡ್ತಾನೆ. ಇದನ್ನು ನಾವು ರಾಷ್ಟ್ರಭಕ್ತರು ನೋಡಿಕೊಂಡು ಸುಮ್ಮನಿರಬೇಕಾ ಎಂದು ಪ್ರಶ್ನಿಸಿದರು. ಐವನ್ ಡಿಸೋಜಾ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಧಮ್ಮಿಲ್ಲ, ಹಾಗಾಗಿ ಎಫ್ ಐಆರ್ ದಾಖಲಾಗಿಲ್ಲ. ಇಲ್ಲಿನ ಪೊಲೀಸರ ನಡೆಯ ಬಗ್ಗೆ ನಮಗೆ ಬಹಳ ನಾಚಿಕೆ ಆಗುತ್ತಿದೆ. ಬಸ್ಸಿಗೆ ಕಲ್ಲು ಹೊಡೆದ ನಾಮನಿರ್ದೇಶಿತ ಕಾರ್ಪೋರೆಟರನ್ನ ಇವರು ಬಂಧಿಸಿಲ್ಲ. ಪಾಲಿಕೆಗೆ ಬಂದರೆ ಇಂಥವರನ್ನು ಮೇಯರ್ ಅವರು ಒದ್ದು ಹೊರಗೆ ಹಾಕಬೇಕು ಎಂದರು.
ಮುಸಲ್ಮಾನರ ಬಸ್ಸಿಗೆ ಕಲ್ಲು ಹೊಡೆಸಿ ಬಿಜೆಪಿ ಕಾರ್ಯಕರ್ತರ ಮೇಲೆ ಹಾಕುವ ಷಡ್ಯಂತ್ರ ಮಾಡಿದ್ದಾರೆ. ಆಮೂಲಕ ಕೋಮು ಗಲಭೆ ನಡೆಸುವ ಷಡ್ಯಂತ್ರ ಮಾಡಿದ್ದರು. ಐವಾನ್ ಡಿಸೋಜ ತನ್ನ ವಕೀಲನ ಬುದ್ದಿ ಉಪಯೋಗಿಸಿ ಮನೆಗೆ ಕಲ್ಲು ಹೊಡೆಸಿದ್ದಾನೆ. ಯಾವುದೋ ಕಾಂಗ್ರೆಸ್ ಪುಂಡ ಪೋಕರಿಗಳಿಂದ ಮನೆಗೆ ಕಲ್ಲು ಹೊಡೆಸಿದ್ದು ಇದನ್ನ ಬಿಜೆಪಿ ಕಾರ್ಯಕರ್ತರು ಹೊಡೆದಿದ್ದು ಅಂತ ಹೇಳ್ತಾನೆ. ನಾವು ಕಲ್ಲು ಹೊಡೆಯೋದಾದ್ರೆ ಮೊನ್ನೆಯೇ ಹೊಡೀತಾ ಇದ್ದೆವು. ಹೊಡೆಯೋದಾದ್ರೆ ನಿಮ್ಮ ಮನೆಗೆ ಅಲ್ಲ, ನಿಮ್ಮ ತಲೆಗೆ ಹೊಡೀತಾ ಇದ್ವಿ.. ನಮ್ಮಲ್ಲಿ ಕಲ್ಲು ಹೊಡೆಯೋ ಸಾಮರ್ಥ್ಯ ಇದ್ದರೂ ಈ ನೆಲದ ಕಾನೂನಿಗೆ ಗೌರವ ಕೊಡ್ತೇವೆ. ಅವನೇ ತನ್ನ ಮನೆಗೆ ಕಲ್ಲು ಹೊಡೆದು ನಾಟಕ ಮಾಡ್ತಿದಾನೆ. ಐವನ್ ಡಿಸೋಜಾ ಬಂಧಿಸದೇ ಇದ್ರೆ ಉಗ್ರ ಹೋರಾಟ ಮಾಡ್ತೇವೆ ಎಂದು ಹೇಳಿದರು. ಪ್ರತಾಪಸಿಂಹ ನಾಯಕ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಜೀವ ಮಠಂದೂರು, ಮಾಜಿ ಸಚಿವ ಎಸ್. ಅಂಗಾರ ಮತ್ತಿತರರಿದ್ದರು.
Mangalore Mla Bharath Shetty slams Ivan Dsouza, says he's mental. We just require five minutes to pelt stone. We will take care of the police department when our government comes he added.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm