ಬ್ರೇಕಿಂಗ್ ನ್ಯೂಸ್
23-08-24 05:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.23: ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ನೀಡಲಾದ ಕಾರ್ಯಾದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಟೋಲ್ ಕೇಂದ್ರ ಆರಂಭಿಸದಿರಲು ತೀರ್ಮಾನಿಸಿದೆ.
ಟೋಲ್ ಕೇಂದ್ರ ಸ್ಥಾಪನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಆಗಸ್ಟ್ 22ರಂದು ಉಡುಪಿ ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದರು. ಮರುದಿನ, ಆಗಸ್ಟ್ 23ರಂದು ಜನವಿರೋಧ ಪರಿಗಣಿಸಿ ಕಾರ್ಯಾದೇಶ ಹಿಂಪಡೆಯುವುದಾಗಿ ಆದೇಶ ಹೊರಡಿಸಿದ್ದಾರೆ.

ಕಾರ್ಕಳ - ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಕೇಂದ್ರ ಆರಂಭಿಸುವುದನ್ನು ವಿರೋಧಿಸಿ ಆಗಸ್ಟ್ 24ರಂದು ರಸ್ತೆ ತಡೆದು ಪಕ್ಷಾತೀತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೂ ಮನವರಿಕೆ ಮಾಡಲಾಗಿತ್ತು. ಖಾಸಗಿ ಬಸ್ ಮಾಲಕರು ಸೇರಿದಂತೆ ಎಲ್ಲ ವಿಭಾಗದಿಂದ ವಿರೋಧ ವ್ಯಕ್ತವಾಗಿತ್ತು. ಇದಲ್ಲದೆ, ಕಂಚಿನಡ್ಕದಿಂದ 7.50 ಕಿಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಜಮಾಡಿ ಟೋಲ್ ಇರುವುದರಿಂದ ಹೊಸ ಟೋಲ್ ಕೇಂದ್ರ ಸ್ಥಾಪಿಸಿದರೆ ಜನರಿಗೆ ಹೊರೆಯಾಗುತ್ತದೆ ಎಂಬ ಬಗ್ಗೆ ಸಚಿವರ ಗಮನಕ್ಕೆ ತರಲಾಗಿತ್ತು.
ಟೋಲ್ ಕೇಂದ್ರ ಸ್ಥಾಪನೆಗಾಗಿ ಭಾರತೀ ಕನ್ಸ್ ಟ್ರಕ್ಷನ್ ಕಂಪನಿಗೆ ಕೆಆರ್ ಡಿಸಿಎಲ್ ಮೂಲಕ ಕಾರ್ಯಾದೇಶ ನೀಡಲಾಗಿತ್ತು. ಆದರೆ ಸ್ಥಳದಲ್ಲಿ ಸರ್ವಿಸ್ ರಸ್ತೆಯಾಗಲೀ, ಶೌಚಾಲಯ ಇನ್ನಿತರ ವ್ಯವಸ್ಥೆಗಳನ್ನು ಮಾಡದೇ ಇರುವುದರಿಂದ ಸದ್ಯಕ್ಕೆ ಕಾರ್ಯಾದೇಶ ಹಿಂಪಡೆಯುವುದಾಗಿ ತನ್ನ ಆದೇಶ ಪತ್ರದಲ್ಲಿ ಸಚಿವ ಜಾರಕಿಹೊಳಿ ತಿಳಿಸಿದ್ದಾರೆ.
Padubidri Karkala Proposed Kanchinadkka toll gate temporarily cancelled after action Committee planned to hold protest. Kanchinadkka Toll Gate Virodhi Horata Samithi has planned to stage a protest against the government’s move to open a toll gate on the Padubidri-Karkala State Highway at Kanchinadkka in Udupi district on Saturday, August 24, according to its president Suhas Hegde Nandalike.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm